ಕರ್ತವ್ಯ ನಿರತ ಯೋಧ ಹೃದಯಾಘಾತದಿಂದ ಸಾವು
ಗದಗ: ಕರ್ತವ್ಯ ನಿರತ ಯೋಧರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಸಿಕ್ಕಿಂನ ಬಾಂಗ್ ಡೋಂಗ್ರೆಯಲ್ಲಿ ನಡೆದಿದೆ.
ಜಿಲ್ಲೆಯ ನರಗುಂದ ತಾಲೂಕಿನ ರಡ್ಡೆರನಾಗನೂರ ಗ್ರಾಮದ ರಾಮನಗೌಡ ಚಂದ್ರಗೌಡರ (40) ಎಂಬವರು ಮೃತಪಟ್ಟ ಯೋಧರಾಗಿದ್ದಾರೆ. ಬಾಂಗ್ ಡೋಂಗ್ರೆಯಲ್ಲಿ ಕರ್ತವ್ಯದಲ್ಲಿದ್ದಾಗ ಹಿಮಪಾತದ ನಡುವೆ ರಕ್ತದೊತ್ತಡ ಏರುಪೇರಾಗಿ ಹೃದಯಾಘಾತವಾಗಿದೆ ಎಂದು ತಿಳಿದು ಬಂದಿದೆ. ಇವರು 2002 ರಲ್ಲಿ ಐಟಿಬಿಪಿಗೆ (ಇಂಡಿಯನ್ ಟಿಬೆಟಿಯನ್ ಬಾರ್ಡರ್ ಸೆಕ್ಯೂರಿಟಿ ಫೋರ್ಸ್) ನೇಮಕವಾಗಿದ್ದರು.




