ಓದಿನ ಕಡೆ ಗಮನ ಕೊಡು ಎಂದ ಪೋಷಕರು: ಕೆರೆಗೆ ಹಾರಿ ಯುವಕ ಆತ್ಮಹತ್ಯೆ
ಧಾರವಾಡ: ಓದಿನ ಕಡೆ ಗಮನ ಕೊಡು ಎಂದು ಪೋಷಕರು ಹೇಳಿದ್ದಕ್ಕೆ ಯುವಕನೋರ್ವ ತನ್ನ ಪ್ರಾಣವನ್ನೇ ಕಳೆದುಕೊಂಡ ಘಟನೆ ಧಾರವಾಡದಲ್ಲಿ ನಡೆದಿದೆ.
ಮೃತನನ್ನು ಚೇತನ್ ತೊಂಡಿಹಾಳ ಎಂದು ಗುರುತಿಸಲಾಗಿದೆ. ಈತ ಧಾರವಾಡದ ಸಾಧನಕೇರಿಯ ನಿವಾಸಿಯೇ ನಗರದ ಕಲಗೇರಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಒಳ್ಳೆಯ ಫುಟ್ಬಾಲ್ ಪ್ಲೇಯರ್ ಆಗಿದ್ದ ಈತನಿಗೆ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದನು.




