February 2, 2026

ಮೋದಿಯನ್ನು ಶ್ಲಾಘಿಸಿದ ಆಚಾರ್ಯ ಪ್ರಮೋದ್ ಕೃಷ್ಣಂ ಕಾಂಗ್ರೆಸ್‌‌ನಿಂದ 6 ವರ್ಷ ಉಚ್ಚಾಟನೆ

0
IMG-20240211-WA0000.jpg



ಲಕ್ನೊ: ಅಶಿಸ್ತಿನ ಕಾರಣಕ್ಕೆ ಮತ್ತು ಪದೇ ಪದೇ ಪಕ್ಷದ ವಿರುದ್ಧ ಹೇಳಿಕೆ ನೀಡಿದ ಆರೋಪದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಆಚಾರ್ಯ ಪ್ರಮೋದ್ ಕೃಷ್ಣಂ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ.


ಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದ ಮತ್ತು ಕಾರ್ಯಕ್ರಮಕ್ಕೆ ಗೈರುಹಾಜರಾದ ಕಾಂಗ್ರೆಸ್ ನಡೆಯನ್ನು ಖಂಡಿಸಿದ ಆಚಾರ್ಯ ಪ್ರಮೋದ್ ಕೃಷ್ಣಂ ಅವರನ್ನು ಕಾಂಗ್ರೆಸ್‌‌ನಿಂದ ಉಚ್ಚಾಟಿಸಲಾಗಿದೆ.

ಇನ್ನು ಫೆಬ್ರವರಿ 19 ರಂದು ಸಂಭಾಲ್‌ನಲ್ಲಿ ಕಲ್ಕಿ ಧಾಮದ ಶಂಕುಸ್ಥಾಪನೆಗೆ ಆಹ್ವಾನಿಸಲು ಕೃಷ್ಣಂ ಅವರು ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರೆದ ಕೆಲವು ದಿನಗಳ ನಂತರ ಈ ಕ್ರಮವು ಬಂದಿದೆ.

Leave a Reply

Your email address will not be published. Required fields are marked *

error: Content is protected !!