ಬೇಹುಗಾರಿಕೆ ಆರೋಪದ ಮೇಲೆ ಕತಾರ್ನಲ್ಲಿ ಜೈಲಿನಲ್ಲಿದ್ದ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿಗಳ ಬಿಡುಗಡೆ
ಹೊಸದಿಲ್ಲಿ: ಬೇಹುಗಾರಿಕೆ ಆರೋಪದ ಮೇಲೆ ಕತಾರ್ನಲ್ಲಿ ಜೈಲಿನಲ್ಲಿದ್ದ ಎಂಟು ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಸರಕಾರ ಇಂದು ಮುಂಜಾನೆ ತಿಳಿಸಿದೆ.
ಬಿಡುಗಡೆಯಾದವರಲ್ಲಿ ಏಳು ಮಂದಿ ಮಧ್ಯಪ್ರಾಚ್ಯ ದೇಶದಲ್ಲಿ 18 ತಿಂಗಳ ಜೈಲು ವಾಸದ ನಂತರ ಈಗಾಗಲೇ ಭಾರತಕ್ಕೆ ಮರಳಿದ್ದಾರೆ ಎನ್ನಲಾಗಿದೆ.
ಸೋಮವಾರ ಮುಂಜಾನೆ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ, ಕತಾರ್ನಲ್ಲಿ ಬಂಧಿತರಾಗಿರುವ ದಹ್ರಾ ಗ್ಲೋಬಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎಂಟು ಭಾರತೀಯ ಪ್ರಜೆಗಳ ಬಿಡುಗಡೆಯನ್ನು ಭಾರತ ಸರ್ಕಾರ ಸ್ವಾಗತಿಸುತ್ತದೆ. ಅವರಲ್ಲಿ ಎಂಟು ಮಂದಿಯಲ್ಲಿ ಏಳು ಮಂದಿ ಭಾರತಕ್ಕೆ ಮರಳಿದ್ದಾರೆ. ಈ ಪ್ರಜೆಗಳ ಬಿಡುಗಡೆ ಮತ್ತು ಮನೆಗೆ ಬರಲು ಅನುವು ಮಾಡಿಕೊಡಲು ಕತಾರ್ ರಾಜ್ಯದ ಎಮಿರ್ ಅವರ ನಿರ್ಧಾರವನ್ನು ನಾವು ಪ್ರಶಂಸಿಸುತ್ತೇವೆ” ಎಂದು MEA ಹೇಳಿಕೆಯಲ್ಲಿ ತಿಳಿಸಿದೆ.
ಬೇಹುಗಾರಿಕೆ ಆರೋಪದ ಮೇಲೆ ಕ್ಯಾಪ್ಟನ್ ನವತೇಜ್ ಸಿಂಗ್ ಗಿಲ್, ಕ್ಯಾಪ್ಟನ್ ಸೌರಭ್ ವಶಿಷ್ಠ, ಕಮಾಂಡರ್ ಪೂರ್ಣೇಂದು ತಿವಾರಿ, ಕ್ಯಾಪ್ಟನ್ ಬೀರೇಂದ್ರ ಕುಮಾರ್ ವರ್ಮಾ, ಕಮಾಂಡರ್ ಸುಗುಣಾಕರ್ ಪಕಾಲ, ಕಮಾಂಡರ್ ಸಂಜೀವ್ ಗುಪ್ತಾ, ಕಮಾಂಡರ್ ಅಮಿತ್ ನಾಗ್ಪಾಲ್ ಮತ್ತು ನಾವಿಕ ರಾಗೇಶ್ ಅವರನ್ನು ಆಗಸ್ಟ್ 2023 ರಲ್ಲಿ ಬಂಧಿಸಲಾಗಿತ್ತು.




