ಮಂಗಳೂರು: ಹಿಂದು ಮಕ್ಕಳು ಕ್ರಿಶ್ಚಿಯನ್ ಶಾಲೆಗಳನ್ನು ಬಹಿಷ್ಕರಿಸಬೇಕು: ಬಿಜೆಪಿ ಶಾಸಕ ಭರತ್ ಶೆಟ್ಟಿ
ಮಂಗಳೂರು: ಕಡಲತಡಿ ಮಂಗಳೂರಿನ ಸೇಂಟ್ ಗೆರೋಸಾ ಶಾಲೆಯ ಶಿಕ್ಷಕರೊಬ್ಬರು ಹಿಂದೂ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಭಾನುವಾರ ದೂರು ದಾಖಲಾಗಿದೆ.
ಶಾಲೆಯ ಮಕ್ಕಳನ್ನು ಕ್ರಿಶ್ಚಿಯನ್ ಧರ್ಮಕ್ಕೆ ಪರಿವರ್ತಿಸುವ ಉದ್ದೇಶದಿಂದ ಶಿಕ್ಷಕ ಹಿಂದೂ ಧರ್ಮದ ಬಗ್ಗೆ ಕಳಪೆಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಶಾಲೆಯ ವಿದ್ಯಾರ್ಥಿಯ ಪೋಷಕರು ದೂರು ದಾಖಲಿಸಿದ್ದಾರೆ. ಶಿಕ್ಷಕಿ ಹಾಗೂ ಶಾಲೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಕೋರಲಾಗಿದೆ.
ಈ ಮಧ್ಯೆ, ಬಿಜೆಪಿ ಶಾಸಕ ವೈ ಭರತ್ ಶೆಟ್ಟಿ ಹಿಂದೂಗಳು ತಮ್ಮ ಮಕ್ಕಳನ್ನು ಕ್ರಿಶ್ಚಿಯನ್ ಮಿಷನರಿಗಳು ನಡೆಸುವ ಶಾಲೆಗಳಿಗೆ ಸೇರಿಸುವುದನ್ನು ತಡೆಯಬೇಕು ಎಂದು ಕರೆ ನೀಡಿದ್ದಾರೆ. ಕ್ರಿಶ್ಚಿಯನ್ ಮಿಷನರಿ ಶಾಲೆಯಲ್ಲಿ ಹಿಂದೂ ವಿರೋಧಿ ಭಾವನೆಗಳು ವ್ಯಕ್ತವಾಗುತ್ತಿರುವುದು ಇದೇ ಮೊದಲಲ್ಲ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.




