ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರು ಮತ್ತು ಮುಖಂಡರ ಮಧ್ಯೆ ಹೊಡೆದಾಟ
ಕೋಲಾರ: ಕೋಲಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗಲಾಟೆ-ಗದ್ದಲ ನಡೆದಿದೆ. ಕಚೇರಿಯಲ್ಲಿ ಹಾಕಲಾಗಿದ್ದ ಬ್ಯಾನರ್ ನಲ್ಲಿ ರಮೇಶ್ ಕುಮಾರ್ , ಕೊತ್ತೂರು ಮಂಜುನಾಥ್, ನಸೀರ್ ಅಹ್ಮದ್ ಫೋಟೋ ಇಲ್ಲದ ಹಿನ್ನಲೆ ಗಲಾಟೆ ನಡೆದಿದ್ದು ಕಾರ್ಯಕರ್ತರು ಮತ್ತು ಮುಖಂಡರ ಮಧ್ಯೆ ಹೊಡೆದಾಟ ನಡೆದಿದೆ.
ಶಾಸಕ ಕೊತ್ತೂರು ಮಂಜುನಾಥ್ ಬೆಂಬಲಿಗರು ಮತ್ತು ಕೆ.ಹೆಚ್.ಮುನಿಯಪ್ಪ ಬೆಂಬಲಿಗರ ನಡುವೆ ಮಾರಾಮಾರಿಯಾಗಿದೆ.




