ಉಳ್ಳಾಲ: ಯುವಕನ ಕೊಲೆಗೆ ಯತ್ನ: ಪ್ರಮುಖ ಆರೋಪಿಯ ಬಂಧನ
ಉಳ್ಳಾಲ: ಬೈಕಲ್ಲಿ ಚಲಿಸುತ್ತಿದ್ದ ಯುವಕನ ತಡೆದು ಇರಿದು ಕೊಲೆ ಮಾಡಲು ಯತ್ನಿಸಿದ ಘಟನೆ ರಾ.ಹೆ.66 ರ ಕೊಲ್ಯ ಎಂಬಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದ್ದು, ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಉಳ್ಳಾಲ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.
ಕುಂಪಲ ನಿವಾಸಿ ಮಹಮ್ಮದ್ ಆರೀಫ್(29)ಇರಿತಕ್ಕೊಳಗಾದ ಯುವಕ. ಆರೀಫ್ ಶುಕ್ರವಾರ ಬೆಳಿಗ್ಗೆ ಕೊಲ್ಯದಿಂದ-ಕುಂಪಲದ ಕಡೆಗೆ ಹೆದ್ದಾರಿಯಲ್ಲಿ ವಿರುದ್ಧ ಧಿಕ್ಕಲ್ಲಿ ಸಂಚರಿಸುತ್ತಿದ್ದ ವೇಳೆ ಕುಂಪಲದಿಂದ-ಕೊಲ್ಯ ಕಡೆಗೆ ಬೈಕಿನಲ್ಲಿ ಧಾವಿಸುತ್ತಿದ್ದ ಮುಝಮ್ಮಿಲ್ ಮತ್ತು ನಿಸಾರ್ ಎಂಬಿಬ್ಬರು ಆರೀಫ್ ನನ್ನು ಕೊಲ್ಯ ಎಂಬಲ್ಲಿ ತಡೆದಿದ್ದಾರೆ. ಆರೋಪಿಗಳು ಆರೀಫ್ ಅವರಿಗೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆಗೆ ಯತ್ನಿಸಿದ್ದಾರೆ.




