ಮಂಗಳೂರು: ಜೆರೋಸಾ ಶಾಲೆಯಲ್ಲಿ ಧರ್ಮದ ಅವಹೇಳನ ಪ್ರಕರಣ: ವಿಎಚ್ ಪಿ ಯಿಂದ ಪ್ರತಿಭಟನೆ
ಮಂಗಳೂರು: ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಜೆರೋಸಾ ಶಾಲೆಯ ಶಿಕ್ಷಕಿ ಅವರನ್ನು ಬಂಧಿಸುವಂತೆ ಒತ್ತಾಯಿಸಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ ಸಂಘಪರಿವಾರದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಗರದ ಖಾಸಗಿ ಶಾಲೆಯೊಂದರ ಶಿಕ್ಷಕಿ ತರಗತಿಯಲ್ಲಿ ಹಿಂದೂ ಧರ್ಮ ಅವಹೇಳನ ಮಾಡಿದ್ದಾರೆನ್ನಲಾದ ಘಟನೆಗೆ ಸಂಬಂಧಿಸಿದಂತೆ ಶಿಕ್ಷಕಿ ವಿರುದ್ದ ಕ್ರಮ ಕೈಗೊಳ್ಳಬೇಕು. ಹಿಂದೂ ಸಂಘಟನೆಯ ಮುಖಂಡರು, ಶಾಸಕರ ಮೇಲೆ ದಾಖಲಿಸಿರುವ ಎಫ್ ಐ ಆರ್ ರದ್ದುಗೊಳಿಸಬೇಕೆಂದು ಒತ್ತಾಯಿಸಿ ಇಂದು ನಗರದ ಮಿನಿ ವಿಧಾನ ಸೌಧದ ಎದುರು ವಿಎಚ್ ಪಿ ಬಜರಂಗದಳ ವತಿಯಿಂದ ಪ್ರತಿಭಟನೆ ನಡೆಯಿತು.
ಆದರೆ ರಸ್ತೆ ತಡೆದು ಪ್ರತಿಭಟನೆ ನಡೆಸುವುದಕ್ಕೆ ಪೊಲೀಸರು ಅವಕಾಶ ನೀಡಲಿಲ್ಲ. ಬ್ಯಾರಿಕೇಡ್ ನುಗ್ಗಿ ಬಂದ ಸಂಘಪರಿವಾರದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಪೊಲೀಸರೊಂದಿಗೆ ತಳ್ಳಾಟ ನಡೆಯಿತು.