ಸುಪ್ರೀಂ ಕೋರ್ಟ್ ಹೇಳಿರುವ ಜಾಗದಲ್ಲಿ ರಾಮಮಂದಿರ ಕಟ್ಟಿಲ್ಲ: ಸಚಿವ ಸಂತೋಷ ಲಾಡ್
ಹುಬ್ಬಳ್ಳಿ: ಸುಪ್ರೀಂ ಕೋರ್ಟ್ ಹೇಳಿರುವ ಜಾಗದಲ್ಲಿ ಇವರು ರಾಮಮಂದಿರ ಕಟ್ಟಿಲ್ಲ. ಅದನ್ನು ಬಿಟ್ಟು ಬೇರೆ ಜಾಗದಲ್ಲಿ ಕಟ್ಟಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಮಂದಿರ ಅಪೂರ್ಣವಾಗಿದೆ. ಬರೀ 40% ಮಾತ್ರ ಕಟ್ಟಲಾಗಿದೆ. ಮಂದಿರ ನಿರ್ಮಾಣದಿಂದ ಬಡತನ ನಿರ್ಮೂಲನೆ ಆಗಲ್ಲ. ಮಂದಿರ ನಿರ್ಮಾಣ ಮಾಡಿದ್ದು ರಾಜಕೀಯ ಇಚ್ಛಾಶಕ್ತಿಯಿಂದ. ಈಗ ಇದನ್ನೇ ಇಟ್ಟುಕೊಂಡು ಬಿಜೆಪಿಯವರು ವೋಟು ಕೇಳತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.




