ಫೆ.22 ರಂದು ಪುತ್ತೂರಿನಲ್ಲಿ ಸುಲ್ತಾನ್ ಡೈಮಂಡ್ & ಗೋಲ್ಡ್ ಶೋರೂಂ ಶುಭಾರಂಭ: ನಟಿ ಪ್ರಿಯಾಮಣಿರಿಂದ ಮಳಿಗೆ ಉದ್ಘಾಟನೆ
ಪುತ್ತೂರು: ಸುಲ್ತಾನ್ ಗೋಲ್ಡ್ & ಡೈಮಂಡ್ 1992ರಿಂದಲೇ ವಿಶ್ವಾಸಾರ್ಹ ಅಭರಣ ಬ್ರಾಂಡ್, ತನ್ನ 10ನೇ ಶಾಖೆಯನ್ನು ಪುತ್ತೂರಿನಲ್ಲಿ ತೆರೆಯಲು ಯೋಜಿಸಿದೆ. ಅದರಂತೆ ಇದೆ ಬರುವ ದಿನಾಂಕ ಫೆಬ್ರವರಿ 22 ರಂದು ಬೆಳಗ್ಗೆ 11 ಗಂಟೆಗೆ ಜನಪ್ರಿಯ ಚಲನಚಿತ್ರ ನಟಿ ಪ್ರಿಯಾಮಣಿ ಇವರಿಂದ ಈ ಮಳಿಗೆ ಉದ್ಘಾಟನೆಗೊಳ್ಳಲಿದೆ.
ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈಅವರು ಮುಖ್ಯ ಅತಿಥಿಯಾಗಲಿದ್ದು, ಮಾಜಿ ಶಾಸಕ ಸಂಜೀವ ಮಠಂದೂರು ಇವರು ವೈವಿಧ್ಯಮಯದ ವಜ್ರದ ಸಂಗ್ರಹವನ್ನುಅನಾವರಣಗೊಳಿಸಲಿದ್ದಾರೆ.
ಸ್ಥಳೀಯ ಕೌನ್ಸಿಲರ್ ಶ್ರೀಮತಿ ವಿದ್ಯಾಗೌರಿಯವರು ಜೆಮ್ ಸ್ಟೋನ್ ಸಂಗ್ರಹವನ್ನು ಅನಾವರಣಗೊಳಿಸಲಿದ್ದಾರೆ. ಪುತ್ತೂರಿನ SDPI ಅಧ್ಯಕ್ಷ ಹಾಜಿ ಇಬ್ರಾಹಿಂ ಸಾಗರ್ “ಆಂಟಿಕ್” ಸಂಗ್ರಹವನ್ನು ಅನಾವರಣಗೊಳಿಸಲಿದ್ದಾರೆ. ಕೆ ಪಿ ಅಹಮದ್ ಹಾಜಿ ಆಕರ್ಷಣ್, ಮೌಂಟನ್ ವ್ಯೂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಇವರು ಚಿನ್ನಾಭರಣದ ಸಂಗ್ರಹವನ್ನು ಅನಾವರಣಗೊಳಿಸಲಿದ್ದಾರೆ. ಸುದಾನ ವಸತಿ ಶಾಲೆಯ ಕರೆಸ್ಪಾಂಡೆಂಟ್, ರೆವರೆಂಡ್ ವಿಜಯ್ ಹಾರ್ವಿನ್ ಮಕ್ಕಳ ಚಿನ್ನಾಭರಣದ ಮತ್ತು ಬೆಳ್ಳಿಯ ಸಂಗ್ರಹವನ್ನು ಅನಾವರಣಗೊಳಿಸಲಿದ್ದಾರೆ. ಲಯನ್ಸ್ 317D, ಅಧ್ಯಕ್ಷೆ ಡಾಕ್ಟರ್. ರಂಜಿತಾಶೆಟ್ಟಿಯವರು CAIA – ಲೈಫ್ ಸ್ಟೈಲ್ ಜ್ಯುವೆಲ್ಲರಿಯನ್ನು ಅನಾವರಣಗೊಳಿಸಲಿದ್ದಾರೆ.
ಕಳೆದ ಮೂರು ದಶಕಗಳಿಂದ ಸುಲ್ತಾನ್ ಗೋಲ್ಡ್ & ಡೈಮಂಡ್ – ನಂಬಿಕೆ, ಶುದ್ಧತೆ, ಡಿಸೈನ್, ವೈವಿಧ್ಯತೆ, ಕನಿಷ್ಠ ತಯಾರಿಕಾ ವೆಚ್ಚ, ಮಾರಾಟ ನಂತರದ ಗ್ರಾಹಕಸ್ನೇಹಿ ಸೇವೆ, ಉಚಿತ ಜ್ಯುವೆಲ್ಲರಿ ನಿರ್ವಹಣಾ ವ್ಯವಸ್ಥೆ ಮುಂತಾದವುಗಳಿಂದಾಗಿ ಜನಮನ್ನಣೆ ಪಡೆದಿದೆ.
ಸುಲ್ತಾನ್ ನಲ್ಲಿ ನಿವ್ವಳ ತೂಕಕ್ಕೆ ಚಿನ್ನದ ಬೆಲೆ ಮತ್ತು ಆಭರಣಗಳಲ್ಲಿರುವ ಕಲ್ಲುಗಳು ಅಥವಾ ಇನ್ನಿತರ ಪೂರಕ ಬೀಟ್ಸ್ -ಮಣಿಗಳನ್ನು ಪ್ರತ್ಯೇಕವಾಗಿ ಬೆಲೆ ಸೂಚ್ಯಂಕದಿಂದ ಮಾರಾಟ ಮಾಡಲಾಗುತ್ತದೆ. ಸುಲ್ತಾನ್ ನಲ್ಲಿ IGI ಪ್ರಮಾಣೀಕೃತ ವಜ್ರದ ಆಭರಣಗಳನ್ನು ಮತ್ತು ಪ್ಲಾಟಿನಮ್ ಗಿಲ್ಡ್ ಇಂಟರ್ನ್ಯಾಷನಲ್ (PGI) ಪ್ರಮಾಣಿಕೃತ ಪ್ಲಾಟಿನಮ್ ಆಭರಣಗಳನ್ನು ಮಾತ್ರ ಮಾರಾಟ ಮಾಡಲಾಗುತ್ತದೆ. ಹಾಗೆಯೇ 100% ಶುದ್ಧ BIS ಹಾಲ್ಮಾರ್ಕ್ HUID 916 ಚಿನ್ನಾಭರಣಗಳನ್ನು ಮಾತ್ರ ಮಾರಾಟ ಮಾಡಲಾಗುತ್ತದೆ.
ಪುತ್ತೂರು ಮಳಿಗೆಯ ಉದ್ಘಾಟನೆಯ ಅಂಗವಾಗಿ ಗ್ರಾಹಕರಿಗೆ ವಿಶೇಷ ಆಕರ್ಷಕ ಕೊಡುಗೆಗಳನ್ನು ನೀಡಲಾಗುತ್ತದೆ.
- ಪ್ರತಿದಿನ ಇಬ್ಬರು ಗ್ರಾಹಕರಿಗೆ ಒಂದು ಗ್ರಾಂ ಚಿನ್ನದ ನಾಣ್ಯ ಗೆಲ್ಲುವ ಅವಕಾಶ.
- ಚಿನ್ನಾಭರಣದ ತಯಾರಿಕಾ ವೆಚ್ಚದಲ್ಲಿ 50% ಕಡಿತ
- ಡೈಮಂಡ್ ಪ್ರತಿ ಕ್ಯಾರೆಟ್ ಮೇಲೆ ರೂ. 8000/- ರಿಯಾಯಿತಿ.
- ಬೆಳ್ಳಿ ಆಭರಣಗಳ ತಯಾರಿಕಾ ವೆಚ್ಚದ ಮೇಲೆ 25% ಕಡಿತ.
- ನಿಮ್ಮ ಹಳೆಯ ಚಿನ್ನದ ವಿನಿಮಿಯದಲ್ಲಿ ಪ್ರತೀ ಗ್ರಾಮಿಗೆ ರೂ 50/- ಹೆಚ್ಚುವರಿಯಾಗಿ ಪಡೆಯಿರಿ.
ಈ ಉದ್ಘಾಟನೆ ಪ್ರಯುಕ್ತ ಕೊಡುಗೆಗಳು ಮಾರ್ಚ್10, 2024 ರ ವರೆಗೆ ಇರಲಿದೆ.
ಪುತ್ತೂರು ಮಳಿಗೆ ಸುಮಾರು 10,000 sq/ft ವಿಶಾಲವಾಗಿದ್ದು, ಇಲ್ಲಿ ಸುಲ್ತಾನ್ ನ ಬ್ರಾಂಡ್ಗಳಾದ ‘ಪ್ಯೂರ್ ವೇರ್ ಡೈಮಂಡ್ ಕಲೆಕ್ಷನ್’, ‘ಅಮೋಕ ಪ್ಲಾಟಿನಂ ಕಲೆಕ್ಷನ್ಸ್’, ‘ಆಕರ್ಷ” ಅನ್ ಕಟ್ ಡೈಮಂಡ್’, ‘ಅಮೂಲ್ಯ’ ಜೆಮ್ ಸ್ಟೋನ್ ಕಲೆಕ್ಷನ್ಸ್’, ‘ತಾರಕ’ ಮಕ್ಕಳ ಆಭರಣಗಳು’, ‘CAIA’ ಲೈಟ್ ವೈಟ್ ಆಭರಣಗಳು’, ಮತ್ತು ನಿತ್ಯೋಪಯೋಗಿ ಆಭರಣಗಳು ಇಲ್ಲಿ ಲಭ್ಯ.
ಸಮಕಾಲೀನ ಮತ್ತು ಸಾಂಪ್ರದಾಯಿಕ ವಿನ್ಯಾಸಗಳು, ಸರಿಸಾಟಿಯಿಲ್ಲದ ಪರಿಶುದ್ಧತೆ ಮತ್ತು ಸೇವೆಗಳ ಉತ್ತಮ ಮಿಶ್ರಣದೊಂದಿಗೆ, ಸುಲ್ತಾನ್ ಪುತ್ತೂರಿನ ಆಭರಣ ಪ್ರಿಯರ ಮನಸ್ಸನ್ನು ಅಸ್ವಾದಿಸಲು ಸಿದ್ಧವಾಗಿದೆ.
ಸುಲ್ತಾನ್ ಡೈಮಂಡ್ಸ್ ಆಂಡ್ ಗೋಲ್ಡ್ ನಿರ್ದೇಶಕರಾದ ಡಾಕ್ಟರ್ ಅಬ್ದುಲ್ ರಹೂಫ್ ಮತ್ತು ಅಬ್ದುಲ್ ರಹೀಮ್ ಅವರು ಮಾತನಾಡುತ್ತಾ, “ನಾವು ಸುಲ್ತಾನ್ ಜ್ಯುವೆಲ್ಲರಿಯ ವಿಶೇಷತೆಗಳನ್ನು ಪುತ್ತೂರು ಜನತೆಗೆ ಪರಿಚಯಿಸಲಿದ್ದು, ನಮ್ಮ ಶೋರೂಮ್ ಗೆ ಭೇಟಿ ಮಾಡಿ ಸುಲ್ತಾನ್ ತನ್ನ ಗ್ರಾಹಕರಿಗೆ ನೀಡುವ ಅನನ್ಯ ಆಭರಣ ಸಂಗ್ರಹ ಮತ್ತು ಸೇವೆಯನ್ನು ಆನಂದಿಸಬೇಕು” ಎಂದು ವಿನಂತಿಸಿದರು. ಹಾಗೆಯೇ ಪುತ್ತೂರಿನ ಈ ಮಳಿಗೆ ನೂರು ಮಂದಿಗೆ ಉದ್ಯೋಗಾವಕಾಶ ಕಲ್ಪಿಸಿದೆ” ಎಂದರು.
“ಸುಲ್ತಾನ್ ಡೈಮಂಡ್ಸ್ ಅಂಡ್ ಗೋಲ್ಡ್ ಕರ್ನಾಟಕ ಮತ್ತು ಕೇರಳದಲ್ಲಿ ಒಟ್ಟು 10 ಶೋ ರೂಮ್ಗಳನ್ನು ಹೊಂದಿದೆ. ಹಾಗೆಯೇ ಶೀಘ್ರದಲ್ಲಿ ಮೈಸೂರು ಮತ್ತು ಬೆಂಗಳೂರುನಲ್ಲಿ ಮತ್ತೆರಡು ಮಳಿಗೆಗಳನ್ನು ತೆರೆಯಲಿದೆ. ಸುಲ್ತಾನ್ ಚಿನ್ನ ಆಮದು ಮಾಡುವ ಲೈಸೆನ್ಸ್ ಹೊಂದಿದ್ದು, ಆಮದಿತ ಶುದ್ಧ ಚಿನ್ನದ ಬಾರ್ ಗಳನ್ನು ತರಿಸುತ್ತದೆ. ಹಾಗೆಯೇ ತನ್ನದೇ ತಯಾರಿಕಾ ಘಟಕವನ್ನು ಹೊಂದಿದೆ. ಹೀಗಾಗಿ ಶುದ್ಧ ಚಿನ್ನದ ಅತ್ಯಂತ ಉತ್ಕೃಷ್ಟವಾಗಿ ತಯಾರಿಸಲಾದ ಆಭರಣಗಳನ್ನು ಕಡಿಮೆ ಬೆಲೆಯಲ್ಲಿ ನೀಡಲು ನಮಗೆ ಸಾಧ್ಯವಾಗುತ್ತದೆ ಎಂದರು.
ಸುಲ್ತಾನ್ ನಲ್ಲಿ ಕನಿಷ್ಠ ತಯಾರಿಕಾ ವೆಚ್ಚ ಇದೆ ಮತ್ತು ವೇಸ್ಟೇಜ್ ವೆಚ್ಚ ಇರುವುದಿಲ್ಲ, ಹಾಗೆಯೇ 11 ತಿಂಗಳ ಮಾಸಿಕ ಕಂತುಗಳ ಯೋಜನೆ ಇದೆ. ಪಾವತಿಗಾಗಿ ಮೊಬೈಲ್ ಆಪ್ ಕೂಡ ಇರುತ್ತದೆ. ಮದುವೆ ಮತ್ತು ಇನ್ನಿತರ ಸಮಾರಂಭಗಳಿಗಾಗಿ ಮುಂಗಡ ಪಾವತಿ ಮಾಡಿ. ಚಿನ್ನದ ಬೆಲೆ ಏರಿಕೆಯಂದ ರಕ್ಷಣೆ ಪಡೆಯಬಹುದು. ಮದುವೆ ಖರೀದಿಗೆ ವಿಶೇಷ ರಿಯಾಯಿತಿ ಇರುತ್ತದೆ. ಸುಲ್ತಾನ್ ಹಬ್ಬ ಹರಿದಿನಗಳಿಗೆ ಹಾಗೆಯೇ ಸಣ್ಣ ಮಕ್ಕಳಿಂದ ಹಿಡಿದು ಹಿರಿಯರವರೆಗೆ, ವಧು-ವರರಿಗೆ ಹೀಗೆ ಎಲ್ಲಾ ವರ್ಗದ ಜನರಿಗೆ ಜನಪ್ರಿಯ ಆಕರ್ಷಕ ಆಭರಣಗಳ ಮಳಿಗೆಯಾಗಿದೆ.
ಪುತ್ತೂರು ಏಳ್ಳುಡಿ ಸೇತುವೆ ಬಳಿಯ ತಾಜ್ ಟವರ್ಸ್ ನಲ್ಲಿ ಈ ವಿಶಾಲ ಮಳಿಗೆ ನೆಲೆ ನಿಂತಿದೆ. (ರಾಮರಾಜ ಕಾಟನ್ ಎದುರುಗಡೆ) ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ – 08246816916




