July 27, 2024

ಅತ್ತಿಗೆಯ ಪ್ರಿಯಕರನನ್ನು ಕೊಲೆಗೈದ ಮೈದುನ

0

ಚಿಕ್ಕಬಳ್ಳಾಪುರ: ಪ್ರಿಯತಮೆಯ ಭೇಟಿ ಮಾಡಲು ಮನೆಗೆ ನುಗ್ಗಿದ ಪ್ರಿಯಕರನನ್ನು ಆಕೆಯ ಮೈದುನ ರಾಡ್ ನಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ.

ನಗರರದ 31 ನೇ ವಾರ್ಡ್ ಕೆಎಸ್‍ಆರ್ ಟಿಸಿ ಬಸ್ ನಿಲ್ದಾಣದ ಹಿಂಭಾಗದ ಇಂದಿರಾನಗರದ ಮನೆಯೊಂದರಲ್ಲಿ ಬುಧವಾರ ಸಂಜೆ ಅಪರಿಚಿತ ವ್ಯಕ್ತಿಯನ್ನ ರಾಘವೇಂದ್ರ ಎಂಬಾತ ರಾಡ್ ನಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿದ್ದ.

ಪ್ರಕರಣ ಸಂಬಂಧ ಚಿಕ್ಕಬಳ್ಳಾಪುರ ನಗರ ಪೊಲೀಸರು ಭೇಟಿ ಮಾಡಿ ಕೊಲೆಯಾದವನ ಗುರುತು ಪತ್ತೆ ಹಚ್ಚಿದ್ದು ಮೃತ ವ್ಯಕ್ತಿ ಸಾದಲಿ ಗ್ರಾಮದ 40 ವರ್ಷದ ಅಂಜಿನಪ್ಪ ಪೈಂಟರ್ ಕೆಲಸ ಅಂತ ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!