ಉಡುಪಿ: ಬೈಕ್ ಸ್ಕಿಡ್: ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು
ಉಡುಪಿ: ಬೈಕ್ ಸ್ಕಿಡ್ ಆದ ಪರಿಣಾಮ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಸಾವನಪ್ಪಿ ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಪರ್ಪಲೆ ಗುಡ್ಡದ ತಿರುವಿನಲ್ಲಿ ಸಂಭವಿಸಿದೆ.
ಮೃತರನ್ನು ಬ್ರಹ್ಮಾವರ ನಿವಾಸಿ ಆಕಾಶ್ ಕಾಂಚನ್(18) ಗುರುತಿಸಲಾಗಿದೆ. ಈತ ನಿಟ್ಟೆಯ ಖಾಸಗಿ ಕಾಲೇಜಿನಲ್ಲಿ ಮೆಕ್ಯಾನಿಕ್ ಇಂಜಿನಿಯರಿಂಗ್ ಓದುತಿದ್ದ ಇವರು ಕಾಲೇಜಿನಲ್ಲಿ ವಾರ್ಷಿಕೋತ್ಸವ ಇದ್ದ ಕಾರಣ ಸ್ನೇಹಿತರೊಡಗೂಡಿ ಪ್ರತ್ಯೇಕ ಬೈಕ್ಗಳಲ್ಲಿ ತೆರಳುತಿದ್ದ ವೇಳೆ ಘಟನೆ ಸಂಭವಿಸಿದೆ.




