February 2, 2026

ಬಿ.ಟೆಕ್ ವಿದ್ಯಾರ್ಥಿಯ ಬರ್ಬರ ಹತ್ಯೆ

0
image_editor_output_image1830672133-1708928415511.jpg

ಬೆಂಗಳೂರು: ಬಿ.ಟೆಕ್ ವಿದ್ಯಾರ್ಥಿಯನ್ನು ಬರ್ಬರವಾಗಿ ಹತ್ಯೆಗೈದು ಸುಟ್ಟು ಹಾಕಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ಲಿನ ಕಾಳನಾಯಕನಹಳ್ಳಿ ಬಳಿ ನಡೆದಿದೆ.

ಹರ್ಷಿತ್ ಕೊಂಟಾಳ ಕೊಲೆಯಾದ ಬಿ.ಟೆಕ್ ವಿದ್ಯಾರ್ಥಿ.

ಉತ್ತರಾಖಂಡ ಮೂಲದ ಹಾಲ್‌ಧ್ವನಿ ಮೂಲದ ಈತ ಆನೇಕಲ್‌ನ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಫೆಬ್ರವರಿ 22ರಂದು ಹರ್ಷಿತ್ ಹಾಸ್ಟೆಲ್‌ನಿಂದ ಕಾಣೆಯಾಗಿದ್ದ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಹಾಸ್ಟೆಲ್‌ನಲ್ಲಿ ಹೊರಗಡೆ ಕಾಣಿಸಿಕೊಂಡಿದ್ದ ವಿಡಿಯೋ ಸಮೇತ ಆಡಳಿತ ಮಂಡಳಿ ದೂರು ನೀಡಿತ್ತು. ಭಾನುವಾರ ಬೆಳಗ್ಗೆ ಆನೇಕಲ್ಲಿನ ಕಾಳನಾಯಕನಹಳ್ಳಿ ಬಳಿ ಶವವಾಗಿ ಪತ್ತೆಯಾಗಿದ್ದಾನೆ.

Leave a Reply

Your email address will not be published. Required fields are marked *

error: Content is protected !!