ಮತ್ತೊಬ್ಬ ಮಹಿಳೆಯನ್ನು ವಿವಾಹವಾದ ಪತಿ: ಮನನೊಂದು ಪತ್ನಿ ನೇಣುಬಿಗಿದು ಆತ್ಮಹತ್ಯೆ
ಚಿತ್ರದುರ್ಗ: ನಂಬಿ ಬಂದವಳನ್ನು ಬಿಟ್ಟು ಪತಿ ಮತ್ತೊಬ್ಬ ಮಹಿಳೆಯನ್ನ ವಿವಾಹವಾದ ವಿಚಾರ ತಿಳಿದ ಮಹಿಳೆ ನೇಣಿಗೆ ಶರಣಾಗಿರುವ ಘಟನೆ ಚಿತ್ರದುರ್ಗ ತಾಲೂಕಿನ ಕೂನಬೇವು ಗ್ರಾಮದಲ್ಲಿ ನಡೆದಿದೆ.
ನೇಣಿಗೆ ಶರಣಾದ ಮಹಿಳೆಯನ್ನು ವಿಶಾಲಾಕ್ಷಿ (21) ಎಂದು ಗುರುತಿಸಲಾಗಿದೆ. ಈಕೆಯ ಮನೆಯ ಹತ್ತಿರವೇ ವಾಸವಿದ್ದ ತಿಪ್ಪೇಸ್ವಾಮಿ, ಜಿಟಿಟಿಸಿಯಲ್ಲಿ (ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ) ತರಬೇತಿ ಪಡೆಯುತ್ತಿದ್ದ ವಿಶಾಲಾಕ್ಷಿಯನ್ನು ಪ್ರೀತಿಸಿ ಕಳೆದ ವರ್ಷವಷ್ಟೇ ವಿವಾಹವಾಗಿದ್ದ.




