ಮಂಗಳೂರು: ನೇಣು ಬಿಗಿದು ಉದ್ಯಮಿ ಆತ್ಮಹತ್ಯೆ
ಮಂಗಳೂರು: ನಗರದಲ್ಲಿ ಖಾಸಗಿ ಬಸ್ ವ್ಯವಹಾರ ನೋಡಿಕೊಳ್ಳುತ್ತಿದ್ದ ಉದ್ಯಮಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದವರು ನಗರದ ಬಜಾಲ್ ನಿವಾಸಿ ಪ್ರಜ್ವಲ್ ಡಿ. (35) ಎಂದು ಗುರುತಿಸಲಾಗಹಿದೆ.
ಇವರು ಭವಾನಿ ಬಸ್ನ ಮಾಲಕರಾಗಿದ್ದ ದೇವೇಂದ್ರ ಅವರ ಎರಡನೇ ಪುತ್ರ. ಜೆ.ಎಂ. ರೋಡ್ನಲ್ಲಿರುವ ಸ್ವಗೃಹದಲ್ಲಿ ಫ್ಯಾನ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಸಹೋದರ ಬಸ್ನ ಮಾಲಕರಾಗಿದ್ದರು. ಪ್ರಜ್ವಲ್ ಅದೇ ವ್ಯವಹಾರ ನೋಡಿಕೊಳ್ಳುತ್ತಿದ್ದರು.





