ಉಡುಪಿ: ಏಕಾಂಗಿಯಾಗಿ ಮನೆಯಲ್ಲಿ ವಾಸಿಸುತ್ತಿದ್ದ ಯುವಕನ ಕೊಲೆ
ಉಡುಪಿ: ಏಕಾಂಗಿಯಾಗಿ ಮನೆಯಲ್ಲಿ ವಾಸಿಸುತ್ತಿದ್ದ ಯುವಕನನ್ನು ದುಷ್ಕರ್ಮಿಗಳು ಶೂಟ್ ಮಾಡಿ ಕೊಲೆ ಮಾಡಿದ ಘಟನೆ ಬ್ರಹ್ಮಾವರ ತಾಲೂಕಿನ ಹನೆಹಳ್ಳಿಯಲ್ಲಿ ನಡೆದಿದೆ.
ಮೃತ ಯುವಕನನ್ನು ಕೃಷ್ಣ (36) ಎಂದು ಗುರುತಿಸಲಾಗಿದೆ. ಶನಿವಾರ ರಾತ್ರಿ 9:30ರ ವೇಳೆಗೆ ಕೃಷ್ಣ ಎಂಬುವವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಅಕ್ಕ ಪಕ್ಕದ ನಿವಾಸಿಗಳಿಗೆ ಫೈರಿಂಗ್ ಶಬ್ದ ಕೇಳಿದೆ. ಆದರೆ ಅವರು ಪಟಾಕಿಯ ಶಬ್ದವೆಂದು ಸುಮ್ಮನಾಗಿದ್ದಾರಂತೆ. ಇನ್ನು ಇಂದು ಮುಂಜಾನೆ ಪ್ರಕರಣ ಬೆಳಕಿಗೆ ಬಂದಿದೆ.





