March 22, 2026

ಮಲ್ಪೆ: ಸಿದ್ದರಾಮಯ್ಯರ ಬಗ್ಗೆ ಅವಹೇಳನಕಾರಿ ಪದ ಬಳಕೆ ಮಾಡಿದ್ದ ವಿಡಿಯೋ ವೈರಲ್: ದಿವಾಕರ್ ಕೋಟ್ಯಾನ್ ವಿರುದ್ಧ FIR ದಾಖಲು

0
image_editor_output_image-2047391198-1709715950778.jpg

ಮಲ್ಪೆ: ರಾಜ್ಯ ಸರಕಾರದ ಉಚಿತ ಯೋಜನೆಗಳ ಜೊತೆ ಬಾಂಬ್ ಕೂಡ ಉಚಿತವಾಗಿ ಸಿಗುತ್ತದೆ ಎಂದು ಹೀಯಾಳಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಬಗ್ಗೆ ಅವಹೇಳನಕಾರಿ ಪದ ಬಳಕೆ ಮಾಡಿ ವಿಡಿಯೋ ವೈರಲ್ ಮಾಡಿದ ಗರಡಿ ಮಜಲು ನಿವಾಸಿ ದಿವಾಕರ್ ಕೋಟ್ಯಾನ್ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಆರೋಪಿ ದಿವಾಕರ್ ಕೋಟ್ಯಾನ್ ವಿಡಿಯೋದಲ್ಲಿ, ‘ಬಸ್ ಟಿಕೆಟ್, 2000ರೂ., ವಿದ್ಯುತ್ ಬಿಲ್ ಫ್ರಿ ಜೊತೆಗೆ ಈಗ ಹೊಸದಾಗಿ ಬಾಂಬ್ ಸ್ಪೋಟ ಫ್ರೀ ಕೂಡ ರಾಜ್ಯ ಸರಕಾರ ಕೊಡುತ್ತಿದೆ. ಇದಕ್ಕೂ ಏನು ಹಣ ಕೊಡಲು ಇಲ್ಲ. ಎಲ್ಲವೂ ಫ್ರಿ. ನೇರವಾಗಿ ಮೇಲೆ…ನೋ ಪಾಸ್ ಪೋಟ್ ನೋ ವೀಸಾ.. ಸನ್ಮಾನ್ಯ ಮುಖ್ಯಮಂತ್ರಿ ಸಿದ್ರುಲ್ಲಾ ಖಾನ್… ಹಿಂದುಗಳೇ ಫ್ರೀ ಬೇಕಲ್ಲ ತೆಗೆದುಕೊಳ್ಳಿ,..ಮುಂದೆ ಇನ್ನು ಆರರು ತಿಂಗಳಿಗೆ ಬಸ್, ವಿದ್ಯುತ್, 2000ರೂ. ಜೊತೆ ಬಾಂಬ್ ಕೂಡ ಫ್ರೀ ಸಿಗುತ್ತದೆ. ಮಜಾ ಮಾಡಿ…’ ಎಂದು ಹೇಳಿದ್ದಾನೆ.

ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶಕ್ಕೂ ಕಾರಣವಾಗಿದೆ. ದಿವಾಕರ್ ಕೋಟ್ಯಾನ್ ರಾಜ್ಯ ಸರಕಾರದ ಯೋಜನೆಗಳ ಜೊತೆ ಬಾಂಬ್ ಉಚಿತ ಹೇಳು ವುದರೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಅವಹೇಳನಕಾರಿ ಯಾಗಿ ನಿಂದಿಸಿದ್ದಾನೆ.ಆತನ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಹಮ್ಮದ್ ಉಡುಪಿ ಮಲ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅದರಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!