December 19, 2025

ವಿಟ್ಲ: ರಾಜೇಶ್ ಕುಮಾರ್ ಬಾಳೆಕಲ್ಲು ಅಧಿಕೃತವಾಗಿ ಬಿಜೆಪಿ ಸೇರ್ಪಡೆ:
ಬಿಜೆಪಿ ರಾಜ್ಯಾಧ್ಯಕ್ಷರ ಸಮ್ಮುಖದಲ್ಲಿ ದಿಕ್ಕಾರ ಕೂಗಿ ವಿರೋಧ ವ್ಯಕ್ತಪಡಿಸಿದ ಕಾರ್ಯಕರ್ತರು

0
IMG-20211206-WA0007.jpg

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ವಿರೋಧ ಪಕ್ಷದ ಮಾಜಿ ನಾಯಕ, ಕಾಂಗ್ರೆಸ್ ಮುಖಂಡ ಅಶೋಕ್ ಕುಮಾರ್ ಶೆಟ್ಟಿ ಮತ್ತು ಮಾಣಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷ, ಜಿಲ್ಲಾ ಕಾಂಗ್ರೆಸ್ ಪ್ರಮುಖ ರಾಜೇಶ್ ಕುಮಾರ್ ಬಾಳೆಕಲ್ಲು ಅವರು ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡರು. ರಾಜೇಶ್ ಬಾಳೆಕಲ್ಲು ಬಿಜೆಪಿ ಸೇರ್ಪಡೆ ಆಗುವುದನ್ನು ವಿರೋಧಿಸಿ ಸ್ವತಃ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದರು.

ಕಬಕದಲ್ಲಿ ನಡೆದ ಪುತ್ತೂರು ಗ್ರಾಮಾಂತರ ಬಿಜೆಪಿ ವತಿಯಿಂದ ನಡೆದ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯಲ್ಲಿ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆಗೊಂಡರು.

ರಾಜೇಶ್ ಬಾಳೆಕಲ್ಲು ಅವರನ್ನು ಈ ಹಿಂದೆ ಕಾಂಗ್ರೆಸ್ ಪಕ್ಷ ಉಚ್ಚಾಟಿಸಿತ್ತು. ಅಶೋಕ್ ಶೆಟ್ಟಿ ಮತ್ತು ರಾಜೇಶ್ ಅವರು ಈ ಹಿಂದೆ ಬಿಜೆಪಿ ಪಾಲಾಯದಲ್ಲಿ ಗುರುತಿಸಿಕೊಂಡಿದ್ದು, ಇಂದು ಅಧಿಕೃತವಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಎಸ್ ಅಂಗಾರ, ವಿಧಾನ ಪರಿಷತ್ ಅಭ್ಯರ್ಥಿ, ಪುತ್ತೂರು ಶಾಸಕ ಸಂಜೀವ ಮಠಂದೂರು, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡರು.

ರಾಜೇಶ್ ಬಾಳೆಕಲ್ಲು ಬಿಜೆಪಿ ಬರುವುದು ಮಾಣಿಲದ ಕೆಲವು ಬಿಜೆಪಿ ಕಾರ್ಯಕರ್ತರಿಗೆ ಮುಜುಗರ ಉಂಟಾಗಿತ್ತು. ಇದರಿಂದ ಒಂದು ಕಡೆ ರಾಜೇಶ್ ಗೆ ಬೆಂಬಲ ಸೂಚಿಸಿದರೆ ಇನ್ನೊಂದೆಡೆ ದಿಕ್ಕಾರ ಕೂಗಲಾಗಿದೆ. ಈ ಹಿಂದೆಯೇ ಅವರು ಬಿಜೆಪಿ ಸೇರುವುದಾಗಿ ಸುದ್ದಿ ಕೇಳಿ ಬಂದಿತ್ತು. ರಾಜೇಶ್ ಬಿಜೆಪಿ ಬರಬಾರದೆಂದು ಮಾಣಿಲದ ಹಿರಿಯ ಕಾರ್ಯಕರ್ತರು ಸಂಬಂಧಪಟ್ಟವರಿಗೆ ಮನವಿ ಮಾಡಿದ್ದರು. ಇದರಿಂದ ರಾಜೇಶ್ ಬಿಜೆಪಿ ಸೇರ್ಪಡೆ ಪ್ರಕ್ರಿಯೆ ಹಾಗೇ ಉಳಿದಿತ್ತು. ಇಂದು ಸೇರ್ಪಡೆ ಆಗುವುದಾಗಿ ನಿರ್ಣಾಯಿಸಲಾಗಿದ್ದು, ಅದರಂತೆ ಸೇರ್ಪಡೆಯಾಗಿದ್ದಾರೆ. ಈ ವಿವಾದ ಮುಂದಿನ ದಿನಗಳಲ್ಲಿ ಯಾವ ರೀತಿಯ ಪರಿಣಾಮ ಬೀಳುತ್ತದೆ ಎಂದು ಕಾದು ನೋಡಬೇಕಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!