ಸುಳ್ಯ: ಸಾಕು ದನ ಮೈಮೇಲೆ ಬಿದ್ದು ವ್ಯಕ್ತಿ ಸಾವು
ಸುಳ್ಯ,ತಮ್ಮದೇ ಸಾಕು ದನ ಮೈಮೇಲೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಸುಳ್ಯದ ಚೊಕ್ಕಾಡಿಯಲ್ಲಿ ನಡೆದಿದೆ. ನಡುಗಲ್ಲು ರಾಧಾಕೃಷ್ಣ ಮೃತ ದುರ್ದೈವಿ.
ರಾಧಾಕೃಷ್ಣ ಅವರು ತಮ್ಮ ಸಾಕು ದನವನ್ನು ಫೆ.27 ರಂದು ಮೇಯಿಸಲು ಕಟ್ಟಿ ಹಾಕಲೆಂದು ತೋಟದ ಬದಿಯಲ್ಲಿ ಕರೆದೊಯ್ಯುತ್ತಿರುವಾಗ ಬರೆಯಲ್ಲಿ ಜಾರಿ ಬಿದ್ದ ಕಾರಣ ದನದ ಕುತ್ತಿಗೆಗೆ ಕಟ್ಟಿದ್ದ ಹಗ್ಗ ಅವರ ಕೈಯಲ್ಲಿದ್ದುದರಿಂದ ಎಳೆಯಲ್ಪಟ್ಟು ದನವು ಇವರ ಮೈಮೇಲೆ ಬಿದ್ದಿದೆ. ಈ ವೇಳೆ ಅಲ್ಲಿದ್ದ ಕೊಕ್ಕೋ ಮರ ಮತ್ತು ಬರೆಯ ಮಧ್ಯದಲ್ಲಿ ಸಿಲುಕಿ ತೀವ್ರ ಗಾಯಗೊಂಡಿದ್ದರು.




