ಚಾಕುವಿನಿಂದ ಇರಿದು ರಿಯಲ್ ಎಸ್ಟೇಟ್ ಉದ್ಯಮಿಯ ಕೊಲೆ
ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿಯನ್ನು ದುಷ್ಕರ್ಮಿಗಳು ಕಾರಿನೊಳಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಯಲಹಂಕದ ಬಾಗಲೂರು ಕ್ರಾಸ್ ಬಳಿ ನಡೆದಿದೆ.
ಆಂಧ್ರ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಕೃಷ್ಣಯಾದವ್ (55) ಕೊಲೆಯಾದವರು.
ಮಾರುತಿ ನಗರದಲ್ಲಿ ವಾಸವಾಗಿದ್ದ ಕೃಷ್ಣ ಯಾದವ್ ಅವರು ಬಾಗಲೂರು ಕ್ರಾಸ್ ಬಳಿ ಕಚೇರಿ ಹೊಂದಿದ್ದು, ಸ್ನೇಹಿತರ ಜತೆ ಹೊರಗೆ ಹೋಗುವಾದಾಗಿ ಮನೆಯವರಿಗೆ ತಿಳಿಸಿ ಸೋಮವಾರ ಸಂಜೆ ೬.೩೦ ರಲ್ಲಿ ತಮ್ಮ ಶ್ಟಿ ಕಾರನ್ನು ತೆಗೆದುಕೊಂಡು ಹೊರಗೆ ಹೋಗಿದ್ದು, ರಾತ್ರಿಯಾದರೂ ಮನೆಗೆ ಹಿಂದಿರುಗಿಲ್ಲ. ಮಂಗಳವಾರ ಬೆಳಗ್ಗೆ ಬಾಗಲೂರು ಕ್ರಾಸ್ನ ಫುಟ್ಪಾತ್ ಬಳಿ ಅನುಮಾನಸ್ಪದವಾಗಿ ನಿಂತಿದ್ದ ಕಾರನ್ನು ಗಮನಿಸಿದ ಸ್ಥಳೀಯರು ಹತ್ತಿರ ಹೋಗಿ ನೋಡಿದಾಗ, ವ್ಯಕ್ತಿಯ ಶವ ಕಂಡು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸುದ್ದಿ ತಿಳಿದು ಯಲಹಂಕ ಠಾಣಾ ಪೊಲೀಸರು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದಾಗ ಕಾರಿನ ಮುಂಭಾಗದ ಸೀಟಿನಲ್ಲಿ ವ್ಯಕ್ತಿಯನ್ನು ಕೊಲೆ ಮಾಡಿರುವುದು ಕಂಡು ಬಂದಿದೆ. ಕೊಲೆಯಾಗಿರುವ ವ್ಯಕ್ತಿಯ ಬಗ್ಗೆ ಮಾಹಿತಿ ಕಲೆ ಹಾಕಿದಾಗ ಇವರು ರಿಯಲ್ ಎಸ್ಟೇಟ್ ಉದ್ಯಮಿ ಕೃಷ್ಣಯಾದವ್ ಎಂಬುದು ಗೊತ್ತಾಗಿದೆ.





