December 19, 2025

ಬೆಳ್ತಂಗಡಿ: ಆ್ಯಂಬುಲೆನ್ಸ್ ಚಾಲಕನ ಮೇಲೆ ಹಲ್ಲೆ: ದಂಪತಿಯನ್ನು ವಶಕ್ಕೆ ಪಡೆದ ಪೊಲೀಸರು

0
image_editor_output_image386476092-1710310192465.jpg

ಬೆಳ್ತಂಗಡಿ: ಆ್ಯಂಬುಲೆನ್ಸ್ ಚಾಲಕನೊಬ್ಬನ ಮೇಲೆ ಬೆಂಗಳೂರು ಮೂಲದ ವ್ಯಕ್ತಿಯೊಬ್ಬ ನಡುರಸ್ತೆಯಲ್ಲೇ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಲಾಯಿಲದಲ್ಲಿ ನಡೆದಿದ್ದು, ಇದೀಗ ಬೆಂಗಳೂರಿನ ದಂಪತಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧಿತರನ್ನು ಬೆಂಗಳೂರಿನ ದಂಪತಿ ಶರತ್, ಶೃತಿ ಎಂದು ಗುರುತಿಸಲಾಗಿದೆ. ಕಡಬದಿಂದ ನೆರಿಯಾಗೆ ಬರುತ್ತಿದ್ದ ಪಶು ವೈದ್ಯಕೀಯ ಆ್ಯಂಬುಲೆನ್ಸ್ ಚಾಲಕನನ್ನು ಓವರ್ ಟೇಕ್ ವಿಚಾರಕ್ಕೆ ಸಂಬಂಧಿಸಿದಂತೆ ದಂಪತಿ ರಸ್ತೆ ಮಧ್ಯೆ ನಿಲ್ಲಿಸಿ ಹಲ್ಲೆ ಮಾಡಿದ್ದಾರೆ. ಈ ವೇಳೆ ತಡೆಯಲು ಬಂದ ಸ್ಥಳೀಯರ ಮೇಲೂ ದಂಪತಿ ಕೂಗಾಡಿದ್ದಾರೆ.

ಹಲ್ಲೆಗೊಳಗಾದ ಆ್ಯಂಬುಲೆನ್ಸ್ ಚಾಲಕ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಗಾಗಲೇ ಪೊಲೀಸರು ಹಲ್ಲೆ ನಡೆಸಿದ ದಂಪತಿಯನ್ನು ವಶಕ್ಕೆ ತೆಗದುಕೊಂಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!