December 19, 2025

ಸಂಸದ ಸಂಗಣ್ಣ ಕರಡಿಗೆ ಕೈ ತಪ್ಪಿದ ಟಿಕೆಟ್: ಕಚೇರಿಗೆ ನುಗ್ಗಿ ಕಲ್ಲು ತೂರಾಡಿದ BJP ಕಾರ್ಯಕರ್ತರು

0
image_editor_output_image-2053217782-1710405782739.jpg

ಕೊಪ್ಪಳ: ಲೋಕಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಕೊಪ್ಪಳದಲ್ಲಿ ಭಿನ್ನಮತ ಭುಗಿಲೆದ್ದಿದೆ.

ಸಂಸದ ಸಂಗಣ್ಣ ಕರಡಿ ಅವರಿಗೆ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಅವರ ಬೆಂಬಲಿಗ ಕಾರ್ಯಕರ್ತರು ಬಿಜೆಪಿ ಕಚೇರಿಗೆ ನುಗ್ಗಿ ಕಲ್ಲು ತೂರಾಡಿದ ಪ್ರಸಂಗ ಗುರುವಾರ ನಡೆದಿದೆ.

ಲೋಕಸಭಾ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರಕ್ಕೆ ಡಾ.ಕೆ. ಬಸವರಾಜ ಅವರಿಗೆ ಟಿಕೆಟ್ ಘೋಷಣೆಯಾಗಿದೆ. ಹಾಲಿ ಸಂಸದ ಸಂಗಣ್ಣ ಕರಡಿ ಅವರಿಗೆ ಟಿಕೆಟ್ ತಪ್ಪಿದ ಹಿನ್ನೆಯಲ್ಲಿ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಕ್ಷದ ಕಚೇರಿಯಲ್ಲಿ ಗ್ಲಾಸ್ ಹೊಡೆದು ಹಾಕಿ ಆಕ್ರೋಶ ಹೊರ ಹಾಕಿದ ಸಂಗಣ್ಣ ಬೆಂಬಲಿಗರು, ಅಭ್ಯರ್ಥಿ ಬಸವರಾಜ ಹಾಗು ಮುಖ್ಯ ಸಚೇತಕ ದೊಡ್ಡನಗೌಡ ಮಾಧ್ಯಮಗೋಷ್ಠಿ ಮಧ್ಯೆ ನುಗ್ಗಲು ಯತ್ನಿಸಿದ್ದಾರೆ. ಅಭ್ಯರ್ಥಿ ಹಾಗು ಬಿಜೆಪಿಗೆ ಧಿಕ್ಕಾರ ಕೂಗಿದರು. ಕಚೇರಿಗೆ ನುಗ್ಗಿ ಖುರ್ಚಿ, ಭಾರತ ಮಾತೆಯ ಫೋಟೊ, ಕಿಟಕಿ ಗ್ಲಾಸ್ ಒಡೆದರು.

Leave a Reply

Your email address will not be published. Required fields are marked *

You may have missed

error: Content is protected !!