December 19, 2025

ಮಂಗಳೂರು: ಸಾಮಾಜಿಕ ಕಾರ್ಯಕರ್ತೆಗೆ ಅವಾಚ್ಯ ಶಬ್ದಗಳಿಂದ ನಿಂದನೆ: ಸಂಘಪರಿವಾರದ ಕಾರ್ಯಕರ್ತನ ವಿರುದ್ಧ ದೂರು ದಾಖಲು

0
image_editor_output_image1587223779-1710494356427.jpg

ಮಂಗಳೂರು: ಮಹಿಳಾ ಮತ್ತು ಮಕ್ಕಳ ಹಕ್ಕುಗಳ ಹೋರಾಟಗಾರ್ತಿ, ಸಾಮಾಜಿಕ ಕಾರ್ಯಕರ್ತೆ ಅಸುಂತ ಡಿಸೋಜ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಸಂಘ ಪರಿವಾರದ ಕಾರ್ಯಕರ್ತ ವಿರುದ್ದ ಮಂಗಳೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಂತು ಬೆದ್ರ ಎಂಬಾತನ ಮೇಲೆ ಜನವಾದಿ ಮಹಿಳಾ ಸಂಘಟನೆಯ ನಿಯೋಗವು ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದಾರೆ.

ನಿಯೋಗದಲ್ಲಿ ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಅಧ್ಯಕ್ಷರಾದ ಜಯಂತಿ ಬಿ ಶೆಟ್ಟಿ,‌ ಕಾರ್ಯದರ್ಶಿ ಭಾರತೀ ಬೋಳಾರ, ಅಸುಂತ ಡಿಸೋಜ, ಪ್ರಮಿಳಾ ದೇವಾಡಿಗ, ಪ್ರಮಿಳಾ ಶಕ್ತಿನಗರ, ಆಶಾ ಬೋಳೂರು, ಯೋಗಿತಾ ಉಳ್ಳಾಲ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!