ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷರಾಗಿ ಉಮರ್ ಯು.ಎಚ್ ನೇಮಕ
ಬೆಂಗಳೂರು: ರಾಜ್ಯ ಸರಕಾರವು ತುಳು, ಬ್ಯಾರಿ,ಕೊಂಕಣಿ ಅಕಾಡಮಿಗಳಿಗೆ ಅಧ್ಯಕ್ಷ ಮತ್ತು ಸದಸ್ಯರನ್ನು ನೇಮಕಗೊಳಿಸಿ ಶನಿವಾರ ಆದೇಶ ಹೊರಡಿಸಿದೆ.
ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷರಾಗಿ ಉಮರ್ ಯು.ಎಚ್ ನೇಮಕ ಮಾಡಲಾಗಿದೆ.
ಬ್ಯಾರಿ ಅಕಾಡಮಿಯ ಸದಸ್ಯರಾಗಿ ಬಿ.ಎಸ್.ಮುಹಮ್ಮದ್ ಚಿಕ್ಕಮಗಳೂರು, ಹಫ್ಸಾ ಬಾನು ಬೆಂಗಳೂರು, ಸಾರಾ ಅಲಿ ಪರ್ಲಡ್ಕ, ಶಮೀರಾ ಜಹಾನ್, ಯು.ಎಚ್. ಖಾಲಿದ್ ಉಜಿರೆ, ತಾಜುದ್ದೀನ್, ಅಬೂಬಕರ್ ಅನಿಲಕಟ್ಟೆ, ಅಬ್ದುಲ್ ಶರೀಫ್, ಹಮೀದ್ ಹಸನ್ ಮಾಡೂರು, ಸಮೀರ್ ಮುಲ್ಕಿ ಅವರನ್ನು ನೇಮಕ ಮಾಡಲಾಗಿದೆ.