ಮಂಗಳೂರು: ಅಂತರ್ ರಾಜ್ಯ, ಜಿಲ್ಲಾ ಗಡಿ ಪ್ರದೇಶ, ಚೆಕ್ ಪೋ ಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ
ಮಂಗಳೂರು: ಲೋಕಸಭಾ ಚುನಾವಣೆ ಘೊಷಣೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸಿ ಬಿ ರಿಷ್ಯಂತ್ ಅಂತರ್ ರಾಜ್ಯ ಗಡಿಗಳನ್ನು ಹೊಂದಿರುವ ಜಿಲ್ಲಾ ಗಡಿ ಪ್ರದೇಶ ಮತ್ತು ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರಮುಖವಾಗಿ ಕೇರಳ-ಕರ್ನಾಟಕ ಗಡಿಭಾಗದಲ್ಲಿರುವ ವಿಟ್ಲ ಸಾರಡ್ಕ ಚೆಕ್ ಪೋಸ್ಟ್ ಭೇಟಿ ನೀಡಿ ಭದ್ರತಾ ಕ್ರಮಗಳನ್ನು ಪರಿಶೀಲಿಸಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು. ಜಿಲ್ಲೆ ಪ್ರವೇಶಿಸುವ ಎಲ್ಲಾ ವಾಹನಗಳನ್ನು ಯಾವುದೇ ಲೋಪಗಳಾಗದಂತೆ ಕಟ್ಟುನಿಟ್ಟಾಗಿ ತಪಾಸಣೆ ನಡೆಸುವಂತೆ ಪೊಲೀಸರಿಗೆ ಸೂಚಿಸಿದರು.





