ಮಾ.21ರಂದು ಅರಂತೋಡು ಎಸ್ ಕೆ ಎಸ್ ಎಸ್ ಎಫ್ ಶಾಖೆ ವತಿಯಿಂದ ಮಜ್ಲಿಸುನ್ನೂರ್ ಹಾಗೂ ಇಫ್ತಾರ್ ಕೂಟ
ಸುಳ್ಯ: ಅರಂತೋಡು ಬದ್ರಿಯಾ ಜುಮ್ಮಾ ಮಸೀದಿ ಅಧೀನದಲ್ಲಿರುವ ಎಸ್ ಕೆ ಎಸ್ ಎಸ್ ಎಫ್ ಅರಂತೋಡು ಶಾಖೆ ವತಿಯಿಂದ ಮಜ್ಲಿಸುನ್ನೂರ್ ಹಾಗೂ ಇಫ್ತಾರ್ ಕೂಟ ಮಾ.21 ರಂದು ಅಸರ್ ನಮಾಜಿನ ಬಳಿಕ ಅರಂತೋಡು ಮಸೀದಿ ವಠಾರ ದಲ್ಲಿ ನಡೆಯಲಿದೆ.
ಮಜ್ಲಿಸ್ ನೇತೃತ್ವ ವನ್ನು ಅರಂತೋಡು ಮಸೀದಿ ಖತೀಬರಾದ ಬಹು ಇಸ್ಮಾಯಿಲ್ ಫೈಝಿ ಗಟ್ಟಮನೆ ನಿರ್ವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ಎಸ್ ಕೆ ಎಸ್ ಎಸ್ ಎಫ್ ಅರಂತೋಡು ಶಾಖೆ ಅಧ್ಯಕ್ಷ ಜುಬೇರ್ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷರಾದ ಅಶ್ರಫ್ ಗುಂಡಿ, ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷ ಟಿ ಎಂ ಶಹೀದ್, ಜಮಾತ್ ಕಾರ್ಯದರ್ಶಿ ಕೆ.ಎಂ. ಮೂಸಾನ್, ಸದರ್ ಮುಅಲ್ಲಿಂ ನೌಶಾದ್ ಅಝ್ಹರಿ, ಸಹಾಯಕ ಅದ್ಯಾಪಕ ಶಾಫಿ ಮುಸ್ಲಿಯಾರ್, ಅನ್ವಾರುಲ್ ಹುದಾ ಯಂಗ್ ಮೆನ್ಸ್ ಅಸೋಸಿಯೇಶನ್ ಇದರ ಅಧ್ಯಕ್ಷ ಮಜೀದ್, ನುಸ್ರತುಲ್ ಇಸ್ಲಾಂ ಮದರಸ ಸಂಚಾಲಕ ಅಮೀರ್, ಎ ಸ್ ಕೆ ಎಸ್ ಎಸ್ ಎಫ್ ಕಾರ್ಯದರ್ಶಿ ಸಂಸುದ್ದೀನ್ ಸೇರಿದಂತೆ ಧಾರ್ಮಿಕ ಸಾಮಾಜಿಕ ನೇತಾರರು ಭಾಗವಹಿಸಲಿದ್ದಾರೆ.