December 18, 2025

ಮಡಿಕೇರಿ: ಸ್ನಾನಕ್ಕೆಂದು ತೆರಳಿದ್ದ ಯುವಕ ನದಿ ನೀರಿನಲ್ಲಿ ಮುಳುಗಿ ಮೃತ್ಯು

0
image_editor_output_image2129468085-1710978830859.jpg

ಮಡಿಕೇರಿ : ಸ್ನಾನಕ್ಕೆಂದು ತೆರಳಿದ ಯುವಕ ನೀರಿನಲ್ಲಿ ಮುಳುಗಿ ಸಾವಿಗೀಡಾದ ಘಟನೆ ಗುಡ್ಡೆಹೊಸೂರು ಬಳಿ ಕಾವೇರಿ ನದಿಯಲ್ಲಿ ನಡೆದಿದೆ.

ಮೃತನನ್ನು ಏಳನೇ ಹೊಸಕೋಟೆಯ ತೊಂಡೂರು ನಿವಾಸಿ ಸುರೇಶ್ ಆಚಾರ್ಯ ಎಂಬುವವರ ಪುತ್ರ ಪ್ರದೀಪ್ (19) ಎಂದು ಗುರುತಿಸಲಾಗಿದೆ.

ಬುಧವಾರ ತನ್ನ ಸ್ನೇಹಿತರೊಂದಿಗೆ ಗುಡ್ಡೆಹೊಸೂರು ಸಮೀಪದ ಬಾಳುಗೋಡು ಎಂಬಲ್ಲಿಗೆ ತೆರಳಿದ ಪ್ರದೀಪ್ ಕಾವೇರಿ ನದಿಗೆ ಇಳಿದಿದ್ದ.

ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಮೃತದೇಹವನ್ನು ಹೊರತೆಗೆದಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!