ಬ್ಯಾರಿ ಸಾಹಿತ್ಯ ಅಕಾಡೆಮಿಯ ನೂತನ ಸದಸ್ಯರಾಗಿ ತಾಜುದ್ದೀನ್ ಅಮ್ಮುಂಜೆ ಆಯ್ಕೆ
ಕಲ್ಲಡ್ಕ: 2024 ನೇ ಸಾಲಿನ ಬ್ಯಾರಿ ಸಾಹಿತ್ಯ ಅಕಾಡೆಮಿಯ ನೂತನ ಸದಸ್ಯರಾಗಿ ಯುವ ಸಾಹಿತಿ, ಹಾಡುಗಾರ, ತಾಜುದ್ದೀನ್ ಅಮ್ಮುಂಜೆ ಅವರು ಆಯ್ಕೆಯಾಗಿದ್ದಾರೆ.
ಮರ್ಹೂಂ ಅಮ್ಮುಂಜೆ ಉಮರಬ್ಬ ಹಾಜಿಯವರ ಮಗನಾದ ತಾಜುದ್ದೀನ್ ರವರು ಬ್ಯಾರಿ ಸಾಹಿತ್ಯ ಲೋಕಕ್ಕೆ ಬಹಳ ಕೊಡುಗೆಯನ್ನು ನೀಡಿದ್ದಾರೆ. ಇವರ ಈ ಪ್ರತಿಭೆಯನ್ನು ಗುರುತಿಸಿದ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಇವರನ್ನು ಸನ್ಮಾನಿಸಿ ಪ್ರಶಸ್ತಿ ನೀಡಿ ಗೌರವಿಸಿದೆ.
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಇವರನ್ನು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಇದರ ಸದಸ್ಯರನ್ನಾಗಿ ನೇಮಕಗೊಳಿಸಲು ಶಿಪಾರಸ್ಸು ಮಾಡಿದ್ದು, ಇದನ್ನು ಮನಗಂಡ ರಾಜ್ಯ ಸರಕಾರ ಬ್ಯಾರಿ ಸಾಹಿತ್ಯ ಅಕಾಡೆಮಿಗೆ ಸದಸ್ಯರನ್ನಾಗಿ ನೇಮಕಗೊಳಿಸಿ ಆದೇಶ ಮಾಡಿರುತ್ತದೆ.





