December 19, 2025

ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ 3 ಮಂದಿಯ ಹತ್ಯೆ: ಪ್ರಕರಣ ಹಿಂದೆ ದೊಡ್ಡ ಶಕ್ತಿ ಇದೆ, ಉನ್ನತ ಮಟ್ಟದ ತನಿಖೆ ನಡೆಸಲು ಎಸ್‌ಡಿಪಿಐ ಆಗ್ರಹ

0
IMG-20240323-WA0001.jpg

ಬೆಳ್ತಂಗಡಿ: ತುಮಕೂರು ತಾಲೂಕಿನ ಕುಚ್ಚಂಗಿ ಕೆರೆಯ ಬಳಿ ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಬೆಳ್ತಂಗಡಿ ತಾಲೂಕಿನ ಮೂರು ಮಂದಿಯ ಹತ್ಯೆ ನಡೆದಿದ್ದು, ಇದೊಂದು ಪೂರ್ವ ನಿಯೋಜಿತ ಕೊಲೆಯಾಗಿದೆ. ರಾಜ್ಯ ಸರಕಾರ ಈ ಪ್ರಕರಣಕ್ಕೆ ಸಂಬಂಧಿಸಿ ಸ್ಪೆಷಲ್ ಇನ್ವೆಸ್ಟಿಗೇಷನ್ ತಂಡ ನೇಮಿಸಿ ಸೂಕ್ತ ತನಿಖೆ ನಡೆಸಬೇಕೆಂದು ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಅಧ್ಯಕ್ಷರಾದ ನವಾಝ್ ಕಟ್ಟೆ ಆಗ್ರಹಿಸಿದರು.

ವ್ಯವಹಾರ ನಿಮಿತ್ತ ಬೆಳ್ತಂಗಡಿ ತಾಲೂಕಿನ ಟಿ.ಬಿ ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್(45) ಮದ್ದಡ್ಕ ನಿವಾಸಿ ಇಸಾಕ್(56) ಶಿರ್ಲಾಲ್ ನಿವಾಸಿ ಇಮ್ತಿಯಾಝ್(34) ಅವರನ್ನು ತುಮಕೂರಿಗೆ ಕರೆಸಿ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ. ಇಂತಹ ಕ್ರೂರ ಕೃತ್ಯದಲ್ಲಿ ಭಾಗಿಯಾದ ಎಲ್ಲಾರಿಗೂ ಶಿಕ್ಷೆಯಾಗಬೇಕು ಮತ್ತು ಮರಣ ಹೊಂದಿದ ಅಮಾಯಕರ ಕುಟುಂಬಕ್ಕೆ ರಾಜ್ಯ ಸರಕಾರ ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!