December 16, 2025

ಉಡುಪಿ ಜಿಲ್ಲೆಯ ವಿವಿಧೆಡೆ ನಡೆದ ಕಳವು ಪ್ರಕರಣ: ಸೊತ್ತು ಸಹಿತ ಮೂವರು ಆರೋಪಿಗಳ ಬಂಧನ

0
image_editor_output_image-927629175-1711841730016.jpg

ಉಡುಪಿ: ಜಿಲ್ಲೆಯ ವಿವಿಧೆಡೆ ನಡೆದ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಮಂಗಳೂರು ನಂತೂರಿನ ಅರ್ಷಿತ್ ಅವಿನಾಶ್ ದೋಡ್ರೆ (23), ಬೈಂದೂರು ಪಡುವರಿಯ ರಿಲ್ವಾನ್ ಅಲಿಯಾಸ್ ರಿಝ್ವಾನ್ (24), ಯಡ್ತರೆಯ ಮಹಮ್ಮದ್ ಅರ್ಬಾಝ್ (23) ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಆರೋಪಿಗಳಿಂದ ಒಟ್ಟು 36,000 ರೂಪಾಯಿ ಮೌಲ್ಯದ ಹಣ ಹಾಗೂ ಕೃತ್ಯಕ್ಕೆ ಉಪಯೋಗಿಸಿದ ಬೈಕ್ ಹಾಗೂ 3 ಮೊಬೈಲ್ ವಶ ಪಡಿಸಿಕೊಳ್ಳಲಾಗಿದೆ.

Leave a Reply

Your email address will not be published. Required fields are marked *

error: Content is protected !!