December 15, 2025

ಕೊಡಗು: ಗುಂಡು ಹಾರಿಸಿ ಒಡಹುಟ್ಟಿದ ತಮ್ಮನನ್ನೇ ಕೊಂದ ಅಣ್ಣ

0
image_editor_output_image115726254-1711841861416.jpg

ಕೊಡಗು: ಒಡಹುಟ್ಟಿದ ಅಣ್ಣನೇ ತಮ್ಮನಿಗೆ ಗುಂಡು ಹೊಡೆದು ಕೊಲೆ ಮಾಡಿರುವ ಘಟನೆ ಪೊನ್ನಂಪೇಟೆ ತಾಲೂಕು ಬೇಗೂರಿನಲ್ಲಿ ನಡೆದಿರುವ ಕುರಿತು ವರದಿಯಾಗಿದೆ.

ಅರ್ವತೋಕ್ಲು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಲ್ಲಂಡ ಪ್ರಕಾಶ್,( 57) ಎಂಬವರಿಗೆ ಅವರ ಸಹೋದರ ಸುಬ್ರಮಣಿ ಬೇಗೂರು ತೋಟದಲ್ಲಿ ಗುಂಡು ಹಾರಿಸಿದ ಪರಿಣಾಮ ಪ್ರಕಾಶ್ ಮೃತಪಟ್ಟಿದ್ದಾರೆ.

ಪ್ರಕಾಶ್ ಅವರ ಪುತ್ರನಿಗೂ ಗುಂಡು ತಗಲಿದ್ದು ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ರವಾನಿಸಲಾಗಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ..

Leave a Reply

Your email address will not be published. Required fields are marked *

error: Content is protected !!