December 19, 2025

ಮಡಿಕೇರಿ: ರಸ್ತೆ ಬದಿಯ ನಾಮಫಲಕಕ್ಕೆ ಬೈಕ್ ಢಿಕ್ಕಿ: ಸವಾರ ಮೃತ್ಯು

0
image_editor_output_image1274951336-1711928651798.jpg

ಪೊನ್ನಂಪೇಟೆ: ರಸ್ತೆಯ ತಿರುವಿನಲ್ಲಿ ನಾಮ ಫಲಕಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ವೀರಾಜಪೇಟೆಯಲ್ಲಿ ನಡೆದಿದೆ.

ತಾಲೂಕಿನ ಕೋತುರು ನಿವಾಸಿ ಸತೀಶ್ ಅವರ ಪುತ್ರ ಶ್ರವಣ್ (20) ಮೃತಪಟ್ಟ ಬೈಕ್‌ ಸವಾರ,

ವಿರಾಜಪೇಟೆ ನಗರಕ್ಕೆ ಆಗಮಿಸಿ ಬೈಕ್ ನಲ್ಲಿ ಮರಳಿ ಹೋಗುವ ಸಂದರ್ಭದಲ್ಲಿ ಬಿಟ್ಟಾಂಗಾಲ ರಸ್ತೆಯ ಬಳಿ ತಿರುವಿನಲ್ಲಿ ನಾಮ ಫಲಕಕ್ಕೆ ಡಿಕ್ಕಿ ಹೊಡೆದು ತಲೆಯ ಭಾಗಕ್ಕೆ ಗಂಭೀರ ಸ್ವರೂಪದ ಪೆಟ್ಟಾಗಿ ಕೆಳಗೆ ಬಿದ್ದಿದ್ದನ್ನು ಗಮನಿಸಿದ ಅದೇ ಮಾರ್ಗವಾಗಿ ಬರುತ್ತಿದ್ದ ಕೇಬಲ್ ಸಂತೋಷ್ ಅವರು ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ತನ್ನ ವಾಹನದಲ್ಲಿ ತೆಗೆದುಕೊಂಡು ಬಂದು ವಿರಾಜಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು.

ತಲೆಯ ಭಾಗಕ್ಕೆ ಗಂಭೀರ ಸ್ವರೂಪದ ಗಾಯಗೊಂಡ ಹಿನ್ನೆಲೆಯಲ್ಲಿ ಶ್ರವಣ್ ಮೃತ ಪಟ್ಟಿದ್ದಾರೆ ಎಂದು ವಿರಾಜಪೇಟೆ ಸರ್ಕಾರಿ ಆಸ್ಪತ್ರೆಯ ವೈದ್ಯರು ಧೃಡಪಡಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!