February 4, 2026

ಮಂಗಳೂರು: ವ್ಯಕ್ತಿಯ ಚೂರಿಯಿಂದ ಇರಿದು ಕೊಲೆಗೆ ಯತ್ನ: 13 ವರ್ಷಗಳ ಹಿಂದೆ ನಡೆದ ಪಂಜಿನಮೊಗೆರು ಜೋಡಿ ಕೊಲೆ ಕುಟುಂಬದ ವ್ಯಕ್ತಿ ಮೇಲೆ ದಾಳಿ

0
image_editor_output_image2136802419-1712466890443

ಮಂಗಳೂರು : ಕರಾವಳಿಯಲ್ಲಿ ಸಂಚಲನ ಸೃಷ್ಟಿಸಿದ್ದ ಪಂಜಿಮೊಗರು ಜೋಡಿ ಕೊಲೆ ಪ್ರಕರಣದಲ್ಲಿ ಸಾವನ್ನಪ್ಪಿದ್ದ ಮಹಿಳೆಯ ಪತಿಯ ಹತ್ಯೆಗೆ ಯತ್ನಿಸಿದ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ನಗರಸಭೆ ಸಮೀಪದ ಬಾಡಿಗೆ ಮನೆಯಲ್ಲಿ ಇಂದು ಮಧ್ಯಾಹ್ನದ ವೇಳೆ ನಡೆದಿದೆ.
ಹಮೀದ್ ಚೂರಿ ಇರಿತಕ್ಕೊಳಗಾದ ವ್ಯಕ್ತಿ.

ಗಂಭೀರ ಸ್ಥಿತಿಯಲ್ಲಿದ್ದ ಗಾಯಾಳು ಹಮೀದ್​ನನ್ನು ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮಂಗಳೂರಿನ ಖ್ಯಾತ ಈಜುಪಟು ಜಾವೇದ್ ಎಂಬಾತನಿಂದ ಕೃತ್ಯ ಶಂಕೆ
ಪ್ರಕರಣ ದಾಖಲಿಸಿಕೊಂಡ ಉಳ್ಳಾಲ ಪೊಲೀಸರು ಆರೋಪಿಗಾಗಿ ಶೋಧಕಾರ್ಯ ಆರಂಭಿಸಿದ್ದಾರೆ. ಮೇಲ್ನೋಟಕ್ಕೆ ಹಣದ ವಿಚಾರವಾಗಿ ಕೃತ್ಯ ನಡೆದಿರುವ ಬಗ್ಗೆ ಅನುಮಾನ ಮೂಡಿದ್ದು, ಮಂಗಳೂರಿನ ಖ್ಯಾತ ಈಜುಪಟು ಜಾವೇದ್​ ಎಂಬಾತನಿಂದ ಕೃತ್ಯ ನಡೆದ ಶಂಕೆ ವ್ಯಕ್ತವಾಗಿದೆ.

13 ವರ್ಷದ ಹಿಂದೆ ನಡೆದಿತ್ತು ಪಂಜಿಮೊಗರು ಜೋಡಿ ಕೊಲೆ
ಪಂಜಿಮೊಗರಿನಲ್ಲಿ 2011ರ ಜೂ.28ರಂದು ಮಧ್ಯಾಹ್ನ ಚೂರಿಯಿಂದ ತಿವಿದು ತಾಯಿ ರಜಿಯಾ ಮತ್ತು ಆಕೆಯ ಪುಟ್ಟ ಮಗು ಫಾತಿಮಾ ಜುವಾ ಎಂಬುವವರನ್ನು ಹತ್ಯೆ ಮಾಡಲಾಗಿತ್ತು.

ಈ ಘಟನೆ ಕರಾವಳಿಯಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಆದರೆ, ಈ ಘಟನೆ ನಡೆದು 13 ವರ್ಷ ಕಳೆದರೂ ಹತ್ಯೆ ಆರೋಪಿಗಳು ಪತ್ತೆಯಾಗಿಲ್ಲ. ಈ ಕುರಿತು ಸ್ಥಳೀಯ ಪೊಲೀಸರ ಜೊತೆ ಸಿಐಡಿ ತನಿಖೆ ನಡೆದರೂ ಹಂತಕರು ಸಿಕ್ಕಿಲ್ಲ.

Leave a Reply

Your email address will not be published. Required fields are marked *

You may have missed

error: Content is protected !!