ಪುತ್ತೂರು: ಅನಾರೋಗ್ಯದಿಂದ ಶಾಲಾ ವಿದ್ಯಾರ್ಥಿ ನಿಧನ
ಪುತ್ತೂರು : ಅನಾರೋಗ್ಯದಿಂದಾಗಿ ಶಾಲಾ ವಿದ್ಯಾರ್ಥಿಯೋರ್ವ ನಿಧನರಾದ ಬಗ್ಗೆ ವರದಿಯಾಗಿದೆ.
ಬಟ್ರುಪಾಡಿ ನಿವಾಸಿ, ಕೊಡಿಪ್ಪಾಡಿ ಶಾಲಾ 7ನೇ ತರಗತಿ ವಿದ್ಯಾರ್ಥಿ ಆಕಾಶ್ ಮೃತ ಬಾಲಕ.
ಆಕಾಶ್ ಅವರ ತಂದೆ ಅನಿಲ್ ರಿಕ್ಷಾ ಚಾಲಕರಾಗಿದ್ದು, ಕೆಲ ಸಮಯದ ಹಿಂದೆ ನಿಧನ ಹೊಂದಿದ್ದರು. ಆ ಬಳಿಕ ಆಕಾಶ್ ಅನಾರೋಗ್ಯದಿಂದ ಬಳಲುತ್ತಿದ್ದರು. ಮಂಗಳೂರು ಆಸ್ಪತ್ರೆಗೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.
ಮೃತರು ತಾಯಿ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ.






