ಮಂಗಳೂರು: ಮೋದಿ ರೋಡ್ ಶೋದಿಂದಾಗಿ ನಗರದ ಹೊಂಡಗಳಿಗೆ ತಾತ್ಕಾಲಿಕ ಮುಕ್ತಿ
ಮಂಗಳೂರು: ನಾರಾಯಣ ಗುರು ವೃತ್ತದಿಂದ ನವಭಾರತ ವೃತ್ತದವರೆಗೆ ರೋಡ್ ಶೋ ನಡೆಸಲಿದ್ದಾರೆ.
ರೋಡ್ ಶೋ ನಡೆಯುವ ಸ್ಥಳ, ಪಾರ್ಕಿಂಗ್ ಸ್ಥಳ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ರೋಡ್ ಶೋ ನಡೆಯುವ ಸ್ಥಳದ ಆಸುಪಾಸಿನ ಎಲ್ಲಾ ಕಟ್ಟಡಗಳು, ಸೇಪ್ ಹೌಸ್ ಮತ್ತು ನಗರದ ಪ್ರಮುಖ ರಸ್ತೆಗಳಲ್ಲಿರುವ ಆಸ್ಪತ್ರೆಗಳು ನಗರ ಪಾಲಿಕೆಯ ಆಯುಕ್ತರ ಕಚೇರಿ, ಕಾಲೇಜು, ಸರ್ಕ್ಯೂಟ್ ಹೌಸ್ ಮತ್ತಿತರ ಕಡೆಗಳಲ್ಲಿನ ಜೇನುಗೂಡುಗಳನ್ನು ತೆರವುಗೊಳಿಸಲು ಸೂಚನೆ ನೀಡಿದ್ದಾರೆ.
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಧಾನಿ ನರೇಂದ್ರ ಮೋದಿ ಅವರು ರೋಡ್ ಶೋ ನಡೆಸಲಿದ್ದು, ಅದಕ್ಕಾಗಿ ತರಾತುರಿಯಲ್ಲಿ ಕೆಲಸಗಳನ್ನು ಮಂಗಳೂರು ಮಹಾನಗರ ಪಾಲಿಕೆ ನಡೆಸುತ್ತಿದೆ. ಮೋದಿಯವರ ರೋಡ್ ಶೋದಿಂದಾಗಿ ಮಂಗಳೂರು ನಗರದ ಹೊಂಡಗಳಿಗೆ ತಾತ್ಕಾಲಿಕ ಮುಕ್ತಿ ದೊರಕಿದಂತಾಗಿದೆ.




