February 4, 2026

ಮಂಗಳೂರು: ಸೆಲೂನ್ ಮಾಲಕನಿಗೆ ಚೂರಿ ಇರಿತ: ಬಂಟ್ವಾಳ ಮೂಲದ ಆರೋಪಿಯ ಬಂಧನ

0
image_editor_output_image2120507426-1713074461684

ಮಂಗಳೂರು: ಸೆಲೂನ್ ಮಾಲಕನಿಗೆ ಚೂರಿಯಿಂದ ಇರಿದು ಪರಾರಿಯಾಗಿದ್ದ ಆರೋಪಿ ಬಂಟ್ವಾಳ ತಾಲೂಕಿನ ಬರೀಮಾರದ ಆನಂದ ಸಪಲ್ಯ (49) ನನ್ನು ಪೊಲೀಸರು ಬಂಧಿಸಿದ್ದಾರೆ.

ರಾಜಕೀಯ ವಿಚಾರವಾಗಿ ನಡೆದ ಚರ್ಚೆ ವಿಕೋಪಕ್ಕೆ ತಿರುಗಿ ಬೋಳಾರದ ಕಾಂತಿ ಹೇರ್ ಡ್ರೆಸ್ಸಸ್ ನ ಮಾಲಕ ಎಡ್ವಿನ್ ವಿನಯ್ ಕುಮಾರ್ (65) ಅವರಿಗೆ ಚೂರಿಯಿಂದ ಇರಿದ ಘಟನೆ ನಗರದ ಬೋಳಾರದ ಸರಕಾರಿ ಶಾಲೆಯ ಬಳಿ ಶನಿವಾರ ಸಂಜೆ ನಡೆದಿತ್ತು.

ಮದ್ಯ ಸೇವಿಸಿದ ಅಮಲಿನಲ್ಲಿದ್ದ ಆರೋಪಿ ಆನಂದ ಸಫಲ್ಯ ಸಮೀಪದಲ್ಲೇ ಇರುವ ತನ್ನ ಮನೆಯಿಂದ ಚೂರಿ ತಂದು ಎಡ್ವಿನ್‌ ಅವರ ಎದೆಗೆ ಇರಿದು ಪರಾರಿಯಾಗಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದರು.

Leave a Reply

Your email address will not be published. Required fields are marked *

error: Content is protected !!