ರಸ್ತೆಯಲ್ಲಿ ತೋಡಿದ ಗುಂಡಿಗೆ ಬಿದ್ದು ಯುವಕ ಮೃತ್ಯು
ಬೆಂಗಳೂರು: ಜಲಮಂಡಳಿ ತೋಡಿದ ಗುಂಡಿಗೆ ಬಿದ್ದು ಓರ್ವ ಯುವಕ ಸಾವನ್ನಪ್ಪಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕೆಂಗೇರಿ ಬಳಿಯ ಕೊಮ್ಮಘಟ್ಟ ಸರ್ಕಲ್ನಲ್ಲಿ ನಡೆದಿದೆ.
ಸದ್ದಾಂ ಪಾಷಾ(20) ಸಾವನ್ನಪ್ಪಿದ್ದರೆ, ಉಮ್ರಾನ್ ಪಾಷಾ ಮತ್ತು ಮುಬಾರಕ್ ಪಾಷಾ ಗಂಭೀರವಾಗಿ ಗಾಯಗೊಂಡಿದ್ದಾರೆ.
ಜೆಜೆ ನಗರ ಮೂಲದ ಇವರು ಒಂದೇ ಸ್ಕೂಟರಿನಲ್ಲಿ ಸಂಚರಿಸುತ್ತಿದ್ದಾಗ ಈ ದುರ್ಘಟನೆ ನಡೆದಿದೆ.




