ಶಿವಮೊಗ್ಗ: ಕಾಮಗಾರಿಯ ಭದ್ರತಾ ಹಣ (ಎಫ್ಡಿ) ವಾಪಸ್ ಕೊಡಲು ಗುತ್ತಿಗೆದಾರನಿಂದ 30,000 ಲಂಚ ಪಡೆಯುತ್ತಿದ್ದ ಸಾಗರ ತಾಲ್ಲೂಕು ಇರುವಕ್ಕಿಯ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಎಇಇ ಲೋಹಿತ್ ಪ್ರಶಾಂತಕುಮಾರ್ ಹಾಗೂ ಲೆಕ್ಕ ಶಾಖೆಯ ಸಹಾಯಕ ಜಿ.ಆರ್.ಗಿರೀಶ್ ಸೋಮವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.