ಐಸ್ಕ್ರೀಂ ತಿಂದ ಬಳಿಕ ಅವಳಿ ಮಕ್ಕಳು ಸಾವು
ಮಂಡ್ಯ: ಐಸ್ಕ್ರೀಂ ತಿಂದ ಬಳಿಕ ಅವಳಿ ಮಕ್ಕಳು ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ.
ಪೂಜಾ, ಪ್ರಸನ್ನ ದಂಪತಿ ಮಕ್ಕಳಾದ ತ್ರಿಶುಲ್ ಹಾಗೂ ತ್ರಿಶ ಸಾವನ್ನಪ್ಪಿದ ಕಂದಮ್ಮಗಳು. ನಿನ್ನೆ ಮಧ್ಯಾಹ್ನ ಮಕ್ಕಳಿಗೆ ತಾಯಿ ಐಸ್ಕ್ರೀಂ ತಿನ್ನಿಸಿದ್ದರು. ತಳ್ಳುವ ಗಾಡಿಯಾತನಿಂದ ಐಸ್ಕ್ರೀಂ ಕೊಡಿಸಿದ್ದರು. ಆನಂತರ ಮಕ್ಕಳು ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ.




