ರಸ್ತೆ ಅಪಘಾತವಾಗಿ ಕಾರಿಗೆ ಬೆಂಕಿ: ಯುವತಿ ಸಜೀವ ದಹನ
ಬೆಂಗಳೂರು: ನೆಲಮಂಗಲದ ಮಾದಾವರ ಬಳಿ ಭಾರೀ ಅಪಘಾತ ಸಂಭವಿಸಿದೆ. ಸಹೋದರನ ಮನೆಯಿಂದ ಊಟ ಮುಗಿಸಿ ಬರುತ್ತಿದ್ದಾಗ ಕಾರು ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು ಹುಡುಗಿಯೊಬ್ಬಳು ಸುಟ್ಟು ಕರಕಲಾದ ದಾರುಣ ಘಟನೆ ನಡೆದಿದೆ.
ಬೆಂಗಳೂರು- ತುಮಕೂರು ಹೈವೆಯ ಮಾದಾವರ ಟೋಲ್ ಬಳಿ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಓಮ್ನಿ ಕಾರಿಗೆ ಬಲೆನೋ ಕಾರು ಹಿಂಬದಿಯಿಂದ ಡಿಕ್ಕಿಯೊಡೆದ ಪರಿಣಾಮ ಓಮ್ನಿಕಾರು ಪಲ್ಟಿಯಾಗಿ ಬೆಂಕಿಗಾಹುತಿಯಾಗಿದೆ.
ಕಾರಿನಲ್ಲಿ ಒಟ್ಟು 8 ಜನ ಪ್ರಯಾಣ ಮಾಡ್ತಿದ್ರು. ಏಳು ಜನಕ್ಕೆ ಸುಟ್ಟ ಗಾಯಗಳಾಗಿದ್ರೇ 15 ವರ್ಷದ ಹುಡುಗಿಯೊಬ್ಬಳು ಸಜೀವ ದಹನವಾಗಿದ್ದಾಳೆ.




