ತಂದೆಯಿಂದಲೇ ಕಾರು ಹರಿದು ಮಗು ಸಾವು
ಬೆಂಗಳೂರು: ಆಕಸ್ಮಿಕವಾಗಿ ತಂದೆಯಿಂದಲೇ ಕಾರು ಹರಿದು ಮಗು ಸಾವನ್ನಪ್ಪಿರೋ ಘಟನೆ ಹೆಚ್ಎಸ್ಆರ್ ಲೇಔಟ್ನ ಆಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಒಂದೂವರೆ ವರ್ಷದ ಶೈಜಾ ಜನ್ನತ್ ಮೃತ ಕಂದಮ್ಮ. ಏಪ್ರಿಲ್ 21ರ ರಾತ್ರಿ 11:30ಕ್ಕೆ ಘಟನೆ ನಡೆದಿದೆ.
ಸಂಬಂಧಿಗಳ ಮದುವೆಗೆ ಎಂದು ಚನ್ನಪಟ್ಟಣಕ್ಕೆ ಹೋಗಿದ್ದ ಕುಟುಂಬ ವಾಪಸ್ ಆಗಿತ್ತು. ಕಾರಿನಿಂದ ಇಳಿದು ಎಲ್ಲರೂ ಮನೆ ಒಳಗೆ ಹೋಗಿದ್ದರು. ಮಗುವಿನ ತಂದೆ ಕಾರಿನಿಂದ ಲಗೇಜ್ ತೆಗೆದು ಮನೆಯೊಳಗೆ ಇಡುತ್ತಿದ್ದರು. ಈ ವೇಳೆ ಮಗು ತಂದೆಯ ಹತ್ತಿರ ಓಡಿ ಬಂದಿದೆ.




