July 3, 2026

ಆಂಧ್ರಪ್ರದೇಶ: ಕಾರು ಮತ್ತು ಲಾರಿ ನಡುವೆ ರಸ್ತೆ ಅಪಘಾತ:
ಮೂವರು ಮೃತ್ಯು

0
acbdfgnkjl2021120817362520211208175210.jpg

ಆಂಧ್ರಪ್ರದೇಶ: ಪ್ರಕಾಶಂ ಜಿಲ್ಲೆಯ ಚೇವೂರು ಗ್ರಾಮದಲ್ಲಿ ಬುಧವಾರ ಸಂಭವಿಸಿದ ಕಾರು ಮತ್ತು ಲಾರಿ ಅಪಘಾತದಲ್ಲಿ ಕನಿಷ್ಠ ಮೂವರು ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಚಾಲಕ ಪಿ.ಪುರುಷೋತ್ತಮ್ (24) ಮತ್ತು ಕಾರು ಮಾಲೀಕ ಅಗ್ನಿಹೋತ್ರಂ ಶ್ರೀನಿವಾಸ ಚಾರಿ (58) ಮತ್ತು ಅವರ ಪತ್ನಿ ರಾಜೇಶ್ವರಿ (55) ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಕೆ.ಮಲ್ಲಿಕಾರ್ಜುನ ತಿಳಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಕಾರು ಚಾಲಕ ಡಿಕ್ಕಿ ಹೊಡೆದಿದ್ದು, ಚಾಲಕ ನಿದ್ದೆಯಲ್ಲಿ ಕಾರು ಚಲಾಯಿಸಿದ್ದು ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಈ ಮೂವರೂ ಚಿತ್ತೂರಿನ ತಿರುಪತಿಯಿಂದ ಒಂಗೋಲ್‌ಗೆ ಅಯ್ಯಪ್ಪನ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬರುತ್ತಿದ್ದರು.
ಮೃತ ಮೂವರ ಮೃತದೇಹಗಳನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಮರಣೋತ್ತರ ಪರೀಕ್ಷೆಯನ್ನು ಪೂರ್ಣಗೊಳಿಸಿದ ನಂತರ ಪೊಲೀಸರು ಆಯಾ ಕುಟುಂಬಗಳಿಗೆ ಹಸ್ತಾಂತರಿಸಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!