March 17, 2026

BJPಯ ಬಂಡಾಯ ಅಭ್ಯರ್ಥಿ ಈಶ್ವರಪ್ಪಗೆ ಚುನಾವಣಾ ಆಯೋಗ ನೀಡಿದ ಚಿಹ್ನೆ ಯಾವುದು ಗೊತ್ತೇ?

0
image_editor_output_image378219964-1713863443419.jpg

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಸೆಡ್ಡು ಹೊಡೆದು, ಅವರ ಪುತ್ರ ಬಿವೈ ರಾಘವೇಂದ್ರ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ಅವರು ಕೊನೆ ಕ್ಷಣದಲ್ಲಿ ನಾಮಪತ್ರ ವಾಪಸ್ ಪಡೆಯಬಹುದು ಎಂಬ ಬಿಜೆಪಿ ನಾಯಕರ ನಿರೀಕ್ಷೆ ಹುಸಿಯಾಗಿದೆ.

ನಾಮಪತ್ರ ವಾಪಸ್ ಪಡೆಯದೇ ಕಣದಲ್ಲಿ ಉಳಿದಿರುವ ಕೆಎಸ್ ಈಶ್ವರಪ್ಪ ಅವರಿಗೆ ಚುನಾವಣಾ ಆಯೋಗ ಇಂದು ಚುನಾವಣಾ ಚಿಹ್ನೆ ನೀಡಿದೆ. ಕಬ್ಬಿನ ಜೊತೆ ಕೈ ಕಟ್ಟಿಕೊಂಡ ನಿಂತ ರೈತನ ಚಿಹ್ನೆಯನ್ನು ಈಶ್ವರಪ್ಪ ಅವರಿಗೆ ನೀಡಲಾಗಿದೆ.

ತಮ್ಮ ಪುತ್ರನಿಗೆ ಹಾವೇರಿಯಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನೀಡಿಲ್ಲ ಎಂಬ ಕಾರಣಕ್ಕೆ ಆಕ್ರೋಶಗೊಂಡಿದ್ದ ಈಶ್ವರಪ್ಪ, ಬಿಎಸ್ ಯಡಿಯೂರಪ್ಪ ಹಾಗೂ ಅವರ ಪುತ್ರರ ವಿರುದ್ಧ ಸಮರ ಸಾರಿದ್ದರು. ಬಿವೈ ರಾಘವೇಂದ್ರ ವಿರುದ್ಧ ಶಿವಮೊಗ್ಗದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!