ಉಪ್ಪಿನಂಗಡಿ: ಬಾರ್ಯ ಗ್ರಾಮ ಪಂಚಾಯತ್ ಸಿಬ್ಬಂದಿ ಆತ್ಮಹತ್ಯೆ
ಉಪ್ಪಿನಂಗಡಿ ಇಲ್ಲಿನ ಬಾರ್ಯ ಗ್ರಾಮದ ಪೆರಿಯೊಟ್ಟು ನಿವಾಸಿ, ಬಾರ್ಯ ಗ್ರಾಮ ಪಂಚಾಯತ್ ಸಿಬಂದಿ ಗಣೇಶ್ ಯಾನೆ ಕುಶಾಲಪ್ಪ (38) ವಿಷ ಸೇವಿಸಿ ಆತ್ಮಹತ್ಯೆಗೈದ ಘಟನೆ ವರದಿಯಾಗಿದೆ.
ಕಳೆದ 19 ವರ್ಷಗಳಿಂದ ಬಾರ್ಯ ಗ್ರಾಮ ಪಂಚಾಯತ್ ಉದ್ಯೋಗಿಯಾಗಿದ್ದು, ಎ. 22ರಂದು ತನ್ನ ಮನೆ ಸಮೀಪ ವಿಷ ಸೇವಿಸಿ ಅಸ್ವಸ್ಥರಾಗಿದ್ದರು. ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಎ. 23ರಂದು ಮೃತಪಟ್ಟರು.
ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ




