ಎಪ್ರಿಲ್ 26 ರಂದು ಸಮಸ್ತ ಮದ್ರಸಗಳಿಗೆ ರಜೆ ಘೋಷಣೆ
ಮಂಗಳೂರು : ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಎಪ್ರಿಲ್ 26 ರಂದು ಸಮಸ್ತ ಮದರಸ ಗಳಿಗೆ ರಜೆ ಘೋಷಿಸಲಾಗಿದೆ.
ಸಮಸ್ತದ ನಿರ್ದೇಶನದಂತೆ ಸಮಸ್ತದ ಅಧೀನದಲ್ಲಿ ಬರುವ ಜಿಲ್ಲೆಯ ಎಲ್ಲಾ ಮದರಸ ಗಳಿಗೆ ರಜೆ ನೀಡಲಾಗಿದೆ ಎಂದು ದ.ಕ. ಜಿಲ್ಲಾ ಜಂ ಇಯ್ಯತುಲ್ ಮುಅಲ್ಲಿಮೀನ್ ಅದ್ಯಕ್ಷ ಸಂಶುದ್ದೀನ್ ದಾರಿಮಿ ಹಾಗೂ ಸಮಸ್ತ ಮದರಸ ಮೆನೇಜ್ ಮೆಂಟ್ ಅಸೋಸಿಯೇಷನ್ ಅಧ್ಯಕ್ಷ ಎಂ.ಎಚ್.ಮೊಹ್ದಿನ್ ಹಾಜಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




