4.8 ಕೋಟಿ ರೂಪಾಯಿ ಹಣ ವಶಕ್ಕೆ: ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ. ಕೆ. ಸುಧಾಕರ್ ವಿರುದ್ಧ FIR ದಾಖಲು
ಬೆಂಗಳೂರು: ಆಪ್ತನ ಮನೆಯಲ್ಲಿ 4.8 ಕೋಟಿ ರೂಪಾಯಿ ಹಣ ವಶಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ. ಕೆ. ಸುಧಾಕರ್ ವಿರುದ್ಧ ಮತದಾರರಿಗೆ ಆಮಿಷ ಹಾಗೂ ಅನಗತ್ಯ ಪ್ರಭಾವದ ಆರೋಪದ ಮೇಲೆ ಚುನಾವಣಾ ಆಯೋಗ ಪ್ರಕರಣ ದಾಖಲಿಸಿದೆ.
BJP ಅಭ್ಯರ್ಥಿ ಡಾ. ಕೆ ಸುಧಾಕರ್ ಆಪ್ತನ ಮನೆ ಮೇಲೆ ಐಟಿ ದಾಳಿ, ಕೋಟ್ಯಾಂತರ ಹಣ ಪತ್ತೆ!
ಚಿಕ್ಕಬಳ್ಳಾಪುರದ ಫ್ಲೈಯಿಂಗ್ ಸ್ಕ್ವಾಡ್ಸ್ ತಂಡ (ಎಫ್ಎಸ್ಟಿ) ಕ್ರಮ ಕೈಗೊಂಡಿರುವುದಾಗಿ ಚುನಾವಣಾ ಆಯೋಗ ಮಾಹಿತಿ ನೀಡಿದೆ. 4. 8 ಕೋಟಿ ಮೌಲ್ಯದ ನಗದನ್ನು ಚಿಕ್ಕಬಳ್ಳಾಪುರದ ಎಫ್ಎಸ್ಟಿ ವಶಪಡಿಸಿಕೊಂಡಿರುವುದಾಗಿ ಶುಕ್ರವಾರ ರಾಜ್ಯ ಮುಖ್ಯ ಚುನಾವಣಾಧಿಕಾರಿ ತಿಳಿಸಿದ್ದಾರೆ.




