May 16, 2024

ಹಾಸನ ಅಶ್ಲೀಲ ಪೆನ್ ಡ್ರೈವ್ ಪ್ರಕರಣ: ಬಂಧನ ಭೀತಿಗೆ ಹೆದರಿ ಅಜ್ಞಾತ ಸ್ಥಳಕ್ಕೆ ತೆರಳಿದ ರೇವಣ್ಣ

0

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಹಾಸನದ ಹೊಳೆ ನರಸೀಪುರದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ಹಾಗು ಪ್ರಜ್ವಲ್ ರೇವಣ್ಣ ವಿರುದ್ದ ಎಫ್ಐಆರ್ ದಾಖಲಾಗಿದ್ದು ಬಂಧನ ಭೀತಿಯಲ್ಲಿ ಹೊಳೆನರಸೀಪುರದಿಂದ ಮಾಜಿ ಸಚಿವ ರೇವಣ್ಣ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಪ್ರಜ್ವಲ್ ಪೆನ್ಡ್ರೈವ್ ಪ್ರಕರಣದ ತನಿಖೆಗೆ ಈಗಾಗಲೇ ಸರ್ಕಾರ ಎಸ್ಐಟಿ (SIT) ತನಿಖಾ ತಂಡವನ್ನು ರಚಿಸಿದ್ದು ಹೊಳೆನರಸೀಪುರದಲ್ಲೂ FIR ದಾಖಲಾಗಿದೆ. ಬಂಧನ ಭೀತಿಯಲ್ಲಿ ಹೊಳೆನರಸಿಪುರದ ಮನೆಯಿಂದ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಇನ್ನು ಹೊಳೆನರಸೀಪುರದ ಐಷಾರಾಮಿ ಬಂಗಲೆಯಲ್ಲಿ ನೀರವ ಮೌನ ಆವರಿಸಿದ್ದು ಕೆಲಸದಾಳುಗಳು, ಪೊಲೀಸ್ ಸಿಬ್ಬಂದಿ ಮಾತ್ರ ಉಪಸ್ಥಿತರಿದ್ದಾರೆ.

ಇನ್ನು ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣ ಮಾದ್ಯಮದಲ್ಲಿ ಪ್ರಸಾರವಾಗುತ್ತಿದ್ದಂತೆ ಹಾಸನದ ಸಂಸದ ಲೊಕಸಭಾ ಚುನಾವಣೆಯಲ್ಲಿ ತಮ್ಮ ಮತಚಲಾಯಿಸಿ ಜರ್ಮನಿಗೆ ತೆರಳಿದ್ದರು.

Leave a Reply

Your email address will not be published. Required fields are marked *

error: Content is protected !!