ಕಲ್ಲಡ್ಕ ಪೇಟೆಯ ಸರ್ವೀಸ್ ರಸ್ತೆಯ ದುಸ್ಥಿತಿಯ ವಿರುದ್ಧ ಸಾರ್ವಜನಿಕರಿಂದ ದಿಢೀರ್ ಪ್ರತಿಭಟನೆ
ಬಂಟ್ವಾಳ: ಕಲ್ಲಡ್ಕ ಪೇಟೆಯ ಸರ್ವೀಸ್ ರಸ್ತೆಯ ದುಸ್ಥಿತಿಯ ವಿರುದ್ಧ ಕಲ್ಲಡ್ಕದ ವರ್ತಕರು ಹಾಗೂ ಸಾರ್ವಜನಿಕರು ದಿಢೀರ್ ಪ್ರತಿಭಟನೆ ನಡೆಸಿ ರಸ್ತೆಯನ್ನು ಡೋಸಿಂಗ್ ಮಾಡಿ ಡಾಮಾರು ಹಾಕಿಕೊಡುವಂತೆ ಕೆಎನ್ಆರ್ ಕಂಪೆನಿಯ ಅಧಿಕಾರಿಗಳನ್ನು ಆಗ್ರಹಿಸಿದರು.
ರಸ್ತೆಯು ಏರು ತಗ್ಗಿನಿಂದ ಕೂಡಿರುವ ಪರಿಣಾಮ ವಾಹನ ಸಾಗುವುದಕ್ಕೆ ತೀರಾ ತೊಂದರೆಯಾಗುತ್ತಿದೆ. ಜತೆಗೆ ಧೂಳುನಿಂದ ಜನರ ಆರೋಗ್ಯ ಕೆಡುತ್ತಿದ್ದು, ನೀರು ಹಾಕಲುಯ ಹೇಳಿದರೆ ಡ್ರೈವರ್ ಇಲ್ಲ, ಟ್ಯಾಂಕರ್ ಇಲ್ಲ ಎಂಬ ಉತ್ತರ ನೀಡುತ್ತೀರಿ ಎಂದು ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡರು.





