September 20, 2024

ನಟ ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ ಆರೋಪಿ ಕಸ್ಟಡಿಯಲ್ಲಿ ಸಾವು: ಬಾಂಬೆ ಹೈಕೋರ್ಟ್ ಮೊರೆ ಹೋದ ಮೃತನ ಕುಟುಂಬ

0

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ ನಡೆಸಿದ ಆರೋಪ ಎದುರಿಸುತ್ತಿದ್ದ ಅನುಜ್ ತಪನ್ ಪೊಲೀಸರ ಕಸ್ಟಡಿಯಲ್ಲಿ ಸಾವನ್ನಪ್ಪಿರುವುದರ ವಿರುದ್ಧ ಆತನ ಕುಟುಂಬದ ಸದಸ್ಯರು ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದು, ಈ ಪ್ರಕರಣದ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಮನವಿ ಮಾಡಿದ್ದಾರೆ.

ಅನುಜ್ ತಪನ್ ಲಾಕಪ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಪ್ರತಿಪಾದಿಸಿದ್ದರೆ, ಈ ಕುರಿತು ಶುಕ್ರವಾರ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿರುವ ಆತನ ತಾಯಿ ರೀಟಾ ದೇವಿ, ಪೊಲೀಸರು ಈ ವಿಷಯದಲ್ಲಿ ಕಟ್ಟು ಕತೆ ಕಟ್ಟುತ್ತಿದ್ದು, ಆತನನ್ನು ಹತ್ಯೆಗೈಯ್ಯಲಾಗಿದೆ ಎಂದು ಆರೋಪಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!