December 19, 2025

ಕಾಸರಗೋಡು: ಕಲ್ಲು ಸಾಗಾಟದ ಲಾರಿ ಪಲ್ಟಿ:
ಜಾರ್ಖಂಡ್ ಮೂಲದ ಕಾರ್ಮಿಕ ಮೃತ್ಯು

0
parking-lot-accidents-what-happens-if-your-insurance-lapses-and-you-have-an-accident-

ಕಾಸರಗೋಡು: ಕೆಂಗಲ್ಲು ಸಾಗಾಟದ ಟಿಪ್ಪರ್ ಲಾರಿ ಪಲ್ಟಿಯಾಗಿ ಕಾರ್ಮಿಕನೋರ್ವ ಮೃತಪಟ್ಟ ಘಟನೆ ಕಾಸರಗೋಡಿನ ಮುಂಡಿತ್ತಡ್ಕ-ಪಳ್ಳಂ ರಸ್ತೆಯ ಬೋಳ್ಕನಡ್ಕ ಎಂಬಲ್ಲಿ ಗುರುವಾರ ಸಂಜೆ ನಡೆದಿದೆ.

ಘಟನೆಯಲ್ಲಿ ಚಾಲಕ ಸೇರಿದಂತೆ ಇಬ್ಬರು ಅಪಾಯದಿಂದ ಪಾರಾಗಿದ್ದಾರೆ. ಜಾರ್ಖಂಡ್ ಮೂಲದ ಸುಧೀರ್(೩೦) ಮೃತಪಟ್ಟವರು.

ಅರ್ಜುನ್ ಮತ್ತು ಅಜಯ್ ಅಪಾಯದಿಂದ ಪಾರಾಗಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಧರೆಗೆ ಡಿಕ್ಕಿ ಹೊಡೆದು ಬಳಿಕ ಹೊಂಡಕ್ಕೆ ಮಗುಚಿ ಬಿದ್ದಿದೆ. ಬದಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!